ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಯಾಗಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಜಲಾಶಯ 70 ವರ್ಷ ಹಳೆಯದ್ದು, ಡ್ಯಾಂ ಸೇಫ್ಟಿ ವರದಿ ನೀಡಲು ಮಾಡಿದ್ದ ಸಮಿತಿಗಳು ಇಲ್ಲಿಯವರೆಗೂ ಸರಿಯಾಗಿ ಮಾಹಿತಿಯನ್ನೇ ಕೊಟ್ಟಿಲ್ಲ. 133 ಟಿಎಂಸಿ ನೀರು ರಾಜ್ಯಕ್ಕೆ ಪಡೆಯಲು ಡ್ಯಾಂ ಕಟ್ಟಲಾಗಿದೆ. 73 ಟಿಎಂಸಿ ಆಂಧ್ರಕ್ಕೆ ಅಂತ ಆಗಿದೆ ಎಂದರು.
ಇನ್ನು 133 ಟಿಎಂಸಿಯಲ್ಲಿ ಈಗ 33 ಟಿಎಂಸಿ ಹೂಳು ತುಂಬಿಕೊಂಡಿದೆ. ಈಗ ಗೇಟ್ ಕೊಚ್ಚಿ ಹೋಗಿದೆ. ಡ್ಯಾಂ ಸೇಫ್ಟಿಗಾಗಿ ಇರುವ ಪ್ರತಿಯೊಂದು ಸಮಿತಿಯನ್ನು ಸೂಕ್ತ ರೀತಿಯಲ್ಲಿ ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಗೇಟ್ ತುಂಡಾದ ಪ್ರಕರಣವನ್ನು ತನಿಖೆಗೆ ಕೊಡಬೇಕು. ಸರ್ಕಾರ ಈಗ ತರಾತುರಿಯಲ್ಲಿ ಏನು ಮಾಡಲು ಹೋಗಬಾರದು. ಎಲ್ಲದಕ್ಕೂ ಸೂಕ್ತ ತಜ್ಞರನ್ನು ನೇಮಕ ಮಾಡಿ ಸಮಸ್ಯೆ ಪರಿಹರಿಸಿ, ಯಾರಾದರೂ ತಪ್ಪಿತಸ್ಥರಿದ್ದರೆ ಅವರಿಗೆ ಕಠಿಣ ಶಿಕ್ಷೆಯಾಗಲೇಬೇಕು ಎಂದು ಆಗ್ರಹಿಸಿದರು.
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…