ರಾಜ್ಯ

ರಾಜ್ಯ ಸರ್ಕಾರ ಕೊಚ್ಚಿ ಹೋಗುವ ಕಾಲ ಬಂದಿದೆ: ಸಂಸದ ಗೋವಿಂದ ಕಾರಜೋಳ

ತುಮಕೂರು: ತುಂಗಭದ್ರಾ ಡ್ಯಾಂ ಕ್ರಸ್ಟ್‌ ಗೇಟ್‌ನ ಚೈನ್‌ ಕಟ್ಟಾಗಿರುವ ಅವಘಡಕ್ಕೆ ಸಂಬಂಧಿಸಿದಂತೆ ಸಂಸದ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ತುಮಕೂರಿನಲ್ಲಿ ಮಾತನಾಡಿದ ಅವರು, ತುಂಗಭದ್ರಾ ಡ್ಯಾಂ ಗೇಟ್‌ ಮುರಿದಿರೋದು ಸರ್ಕಾರಕ್ಕೆ ಅಪಶಕುನದ ಮನ್ಸೂಚನೆ ನೀಡಿದೆ ಎಂದರು.

ತುಂಗಭದ್ರಾ ಜಲಾಶಯದ ಗೇಟ್‌ ಮುರಿದು ಹೋಗಿರುವುದು ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಅಪಶಕುನ. ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸರಿಯಾಗಿ ಕೆಲಸ ಮಾಡುತ್ತಿಲ್ಲ. ರಾಜ್ಯದಲ್ಲಿ ಆಡಳಿತ ಸರಿಯಾಗಿ ಆಗುತ್ತಿಲ್ಲ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ನಿಂತುಹೋಗಿವೆ. ಆದ್ದರಿಂದ ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಏನೂ ಬೇಕಾದರೂ ಆಗಬಹುದು. ಅದಕ್ಕೆ ತುಂಗಭದ್ರಾ ಡ್ಯಾಂನಲ್ಲಿ ನಡೆದಿರುವ ಘಟನೆಯೇ ಸಾಕ್ಷಿ ಎಂದರು.

ಇನ್ನು ರಾಜ್ಯ ಸರ್ಕಾರ ಮೊದಲು ನೀರಾವರಿ ಸಚಿವರನ್ನು ನೇಮಕ ಮಾಡಬೇಕು. ಅವರು ಆಡಳಿತಕ್ಕಿಂತ ಹೆಚ್ಚು ರಾಜಕಾರಣಕ್ಕೆ  ಒತ್ತು ಕೊಡುವ ಸ್ಥಿತಿಯಲ್ಲಿದ್ದಾರೆ. ಪಕ್ಷದ ಅಧ್ಯಕ್ಷರಾಗಿ ಅವರು ಚುನಾವಣೆಗೆ ಹೆಚ್ಚು ಒತ್ತು ಕೊಡುತ್ತಿದ್ದಾರೆ. ಹೀಗಾಗಿ ನೀರಾವರಿ ಇಲಾಖೆ ಅನಾಥವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಈಗಾಗಲೇ ತುಂಗಭದ್ರಾ ಡ್ಯಾಂನಿಂದ 15 ಲಕ್ಷ ಎಕರೆಗೆ ಆಗುವಷ್ಟು ನೂರು ವ್ಯರ್ಥವಾಗಿ ಆಂಧ್ರಪ್ರದೇಶ ಹಾಗೂ ತೆಲಂಗಾಣ ಪಾಲಾಗಿದೆ. ಆದ್ದರಿಂದ ನಮ್ಮ ರಾಜ್ಯದ ರೈತರು ಕಣ್ಣೀರು ಹಾಕುವ ಪರಿಸ್ಥಿತಿ ಎದುರಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದ ಜನತೆಗೆ ನ್ಯಾಯ ಸಿಗುತ್ತಿಲ್ಲ. ಆದ್ದರಿಂದ ಜನರು ಕಣ್ಣೀರು ಹಾಕುತ್ತಿದ್ದಾರೆ. ಜನರ ಕಣ್ಣೀರ ಶಾಪ ಸಿದ್ದರಾಮಯ್ಯರ ಸರ್ಕಾರಕ್ಕೆ ತಟ್ಟಲಿದೆ. ಸಿದ್ದರಾಮಯ್ಯ ಸರ್ಕಾರ ಕೊಚ್ಚಿ ಹೋಗುವ ಕಾಲ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

6 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

7 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

8 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

8 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

8 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

9 hours ago