ತುಮಕೂರು: ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ನ ಚೈನ್ ಕಟ್ಟಾಗಿರುವ ಅವಘಡಕ್ಕೆ ಸಂಬಂಧಿಸಿದಂತೆ ಸಂಸದ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಬಗ್ಗೆ ತುಮಕೂರಿನಲ್ಲಿ ಮಾತನಾಡಿದ ಅವರು, ತುಂಗಭದ್ರಾ ಡ್ಯಾಂ ಗೇಟ್ ಮುರಿದಿರೋದು ಸರ್ಕಾರಕ್ಕೆ ಅಪಶಕುನದ ಮನ್ಸೂಚನೆ ನೀಡಿದೆ ಎಂದರು.
ತುಂಗಭದ್ರಾ ಜಲಾಶಯದ ಗೇಟ್ ಮುರಿದು ಹೋಗಿರುವುದು ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಅಪಶಕುನ. ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸರಿಯಾಗಿ ಕೆಲಸ ಮಾಡುತ್ತಿಲ್ಲ. ರಾಜ್ಯದಲ್ಲಿ ಆಡಳಿತ ಸರಿಯಾಗಿ ಆಗುತ್ತಿಲ್ಲ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ನಿಂತುಹೋಗಿವೆ. ಆದ್ದರಿಂದ ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಏನೂ ಬೇಕಾದರೂ ಆಗಬಹುದು. ಅದಕ್ಕೆ ತುಂಗಭದ್ರಾ ಡ್ಯಾಂನಲ್ಲಿ ನಡೆದಿರುವ ಘಟನೆಯೇ ಸಾಕ್ಷಿ ಎಂದರು.
ಇನ್ನು ರಾಜ್ಯ ಸರ್ಕಾರ ಮೊದಲು ನೀರಾವರಿ ಸಚಿವರನ್ನು ನೇಮಕ ಮಾಡಬೇಕು. ಅವರು ಆಡಳಿತಕ್ಕಿಂತ ಹೆಚ್ಚು ರಾಜಕಾರಣಕ್ಕೆ ಒತ್ತು ಕೊಡುವ ಸ್ಥಿತಿಯಲ್ಲಿದ್ದಾರೆ. ಪಕ್ಷದ ಅಧ್ಯಕ್ಷರಾಗಿ ಅವರು ಚುನಾವಣೆಗೆ ಹೆಚ್ಚು ಒತ್ತು ಕೊಡುತ್ತಿದ್ದಾರೆ. ಹೀಗಾಗಿ ನೀರಾವರಿ ಇಲಾಖೆ ಅನಾಥವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಈಗಾಗಲೇ ತುಂಗಭದ್ರಾ ಡ್ಯಾಂನಿಂದ 15 ಲಕ್ಷ ಎಕರೆಗೆ ಆಗುವಷ್ಟು ನೂರು ವ್ಯರ್ಥವಾಗಿ ಆಂಧ್ರಪ್ರದೇಶ ಹಾಗೂ ತೆಲಂಗಾಣ ಪಾಲಾಗಿದೆ. ಆದ್ದರಿಂದ ನಮ್ಮ ರಾಜ್ಯದ ರೈತರು ಕಣ್ಣೀರು ಹಾಕುವ ಪರಿಸ್ಥಿತಿ ಎದುರಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದ ಜನತೆಗೆ ನ್ಯಾಯ ಸಿಗುತ್ತಿಲ್ಲ. ಆದ್ದರಿಂದ ಜನರು ಕಣ್ಣೀರು ಹಾಕುತ್ತಿದ್ದಾರೆ. ಜನರ ಕಣ್ಣೀರ ಶಾಪ ಸಿದ್ದರಾಮಯ್ಯರ ಸರ್ಕಾರಕ್ಕೆ ತಟ್ಟಲಿದೆ. ಸಿದ್ದರಾಮಯ್ಯ ಸರ್ಕಾರ ಕೊಚ್ಚಿ ಹೋಗುವ ಕಾಲ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…