ರಾಜ್ಯ

ತುಂಗಭದ್ರಾ ಡ್ಯಾಂ ಗೇಟ್‌ ಕಟ್:‌ ರೈತರು ಗಾಬರಿಯಾಗುವ ಅಂತಕವಿಲ್ಲ; ಡಿಕೆ ಶಿವಕುಮಾರ್

ಕೊಪ್ಪಳ: ಹೊಸಪೇಟೆಯ ತುಂಗಭದ್ರಾ ಜಲಾಶಯದ 19ನೇ ಗೇಟ್ ಕೊಚ್ಚಿ ಹೋಗಿರುವ ಹಿನ್ನೆಲೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಗೇಟ್ ದುರಸ್ತಿಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೊಪ್ಪಳ, ರಾಯಚೂರು, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ 12 ಲಕ್ಷ ಎಕರೆ ನೀರಾವರಿಗೆ ಜಲಾಶಯದ ನೀರು ಅಗತ್ಯವಾಗಿ ಬೇಕಾಗಿದೆ. ಶನಿವಾರ ರಾತ್ರಿ ಹತ್ತು ಗೇಟ್ ಮೂಲಕ ನೀರು ಬಿಟ್ಟಾಗ ಅದರಲ್ಲಿ 19ನೇ ಗೇಟ್ ಕಳಚಿಕೊಂಡಿದೆ. ತಕ್ಷಣ ನಮ್ಮ ಅಧಿಕಾರಿಗಳು, ಜನಪ್ರನಿಧಿಗಳು ಚರ್ಚಿಸಿ ಅನುಮತಿ ಪಡೆದು ತಕ್ಷಣ ಎಲ್ಲ ಗೇಟ್ ಮೂಲಕ ನೀರು ಹೊರ ಬಿಡಲಾಗಿದೆ ಎಂದರು

ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ ನಾಲ್ಕು ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಗೇಟ್ ದುರಸ್ತಿ ಜವಾಬ್ದಾರಿ ಅನುಭವಿ ಸಂಸ್ಥೆಗೆ ವಹಿಸಲಾಗಿದೆ. ನಾರಾಯಣ ಎಂಜಿನಿಯರಿಂಗ್ ಹಾಗೂ ಹಿಂದುಸ್ಥಾನ ಕಂಪನಿಗೆ ಜಲಾಶಯದ ವಿನ್ಯಾಸ ನೀಡಲಾಗಿದೆ. ತಾಂತ್ರಿಕ ತಂಡದವರು ನಿನ್ನೆ ರಾತ್ರಿಯೇ ಇಲ್ಲಿಗೆ ಬಂದು ತಕ್ಷಣ ಕೆಲಸ ಆರಂಭಿಸಿದ್ದಾರೆ ಎಂದು ಮಾಹಿತಿ ನೀಡಿದರು.

ರೈತರಿಗೆ ಒಂದು ಬೆಳೆಗೆ ನೀರು ಉಳಿಸಬೇಕೆಂದು ತೀರ್ಮಾನಿಸಲಾಗಿದೆ. ನೆರೆ ರಾಜ್ಯಗಳಿಗೆ ಅವರ ಪಾಲಿನ 25 ಟಿಎಂಸಿ ಅಡಿ ನೀರು ಕೊಡಲಾಗಿದೆ. ಇನ್ನು 90 ಟಿಎಂಸಿ ಅಡಿ ಕೊಡಬೇಕಿದೆ. ರೈತರು ಗಾಬರಿಯಾಗುವ ಅಗತ್ಯವಿಲ್ಲ. ಮೂರು ಸರ್ಕಾರ ಒಟ್ಟಾಗಿ ಸಮಸ್ಯೆ ನಿವಾರಿಸಲಿವೆ. ರೈತರನ್ನು ಬದುಕಿಸಲು ಬೇಕಾದ ಕ್ರಮ ತೆಗೆದುಕೊಳ್ಳಲಾಗುವುದು. ಭದ್ರತೆ ದೃಷ್ಟಿಯಿಂದ ಜಲಾಶಯದಿಂದ ಎರಡು ಕಿ.ಮೀ.ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗುತ್ತಿದ್ದು, ಜನಪ್ರತಿನಿಧಿಗಳು ಸೇರಿ ಇತರರನ್ನು ಬಿಡುವಂತಿಲ್ಲ ಎಂದು ಹೇಳಿದರು.

ಇದು ತಾಂತ್ರಿಕ ವಿಷಯವಾಗಿದ್ದು, ಜಲಾಶಯ ರಾಜ್ಯದ ಸಂಪತ್ತು. ಇದನ್ನು ಉಳಿಸಬೇಕಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ. ಕೊಚ್ಚಿ ಹೋಗಿರುವ ತುಂಗಭದ್ರಾ ಜಲಾಶಯದ ಗೇಟ್ ಅಳವಡಿಕೆ ಕಾರ್ಯ ವೇಗ ಪಡೆದುಕೊಂಡಿದ್ದು. ಬೇರೆ ಟೀಕೆ ಟಿಪ್ಪಣೆಗಿಂತ ಮೊದಲು ಗೇಟ್ ಸರಿಪಡಿಸುವುದು ನಮ್ಮ ಆದ್ಯತೆಯಾಗಿದೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

43 mins ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

46 mins ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

53 mins ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

59 mins ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

1 hour ago