ಕೊಪ್ಪಳ: ಹೊಸಪೇಟೆಯ ತುಂಗಭದ್ರಾ ಜಲಾಶಯದ 19ನೇ ಗೇಟ್ ಕೊಚ್ಚಿ ಹೋಗಿರುವ ಹಿನ್ನೆಲೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಗೇಟ್ ದುರಸ್ತಿಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೊಪ್ಪಳ, ರಾಯಚೂರು, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ 12 ಲಕ್ಷ ಎಕರೆ ನೀರಾವರಿಗೆ ಜಲಾಶಯದ ನೀರು ಅಗತ್ಯವಾಗಿ ಬೇಕಾಗಿದೆ. ಶನಿವಾರ ರಾತ್ರಿ ಹತ್ತು ಗೇಟ್ ಮೂಲಕ ನೀರು ಬಿಟ್ಟಾಗ ಅದರಲ್ಲಿ 19ನೇ ಗೇಟ್ ಕಳಚಿಕೊಂಡಿದೆ. ತಕ್ಷಣ ನಮ್ಮ ಅಧಿಕಾರಿಗಳು, ಜನಪ್ರನಿಧಿಗಳು ಚರ್ಚಿಸಿ ಅನುಮತಿ ಪಡೆದು ತಕ್ಷಣ ಎಲ್ಲ ಗೇಟ್ ಮೂಲಕ ನೀರು ಹೊರ ಬಿಡಲಾಗಿದೆ ಎಂದರು
ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ ನಾಲ್ಕು ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಗೇಟ್ ದುರಸ್ತಿ ಜವಾಬ್ದಾರಿ ಅನುಭವಿ ಸಂಸ್ಥೆಗೆ ವಹಿಸಲಾಗಿದೆ. ನಾರಾಯಣ ಎಂಜಿನಿಯರಿಂಗ್ ಹಾಗೂ ಹಿಂದುಸ್ಥಾನ ಕಂಪನಿಗೆ ಜಲಾಶಯದ ವಿನ್ಯಾಸ ನೀಡಲಾಗಿದೆ. ತಾಂತ್ರಿಕ ತಂಡದವರು ನಿನ್ನೆ ರಾತ್ರಿಯೇ ಇಲ್ಲಿಗೆ ಬಂದು ತಕ್ಷಣ ಕೆಲಸ ಆರಂಭಿಸಿದ್ದಾರೆ ಎಂದು ಮಾಹಿತಿ ನೀಡಿದರು.
ರೈತರಿಗೆ ಒಂದು ಬೆಳೆಗೆ ನೀರು ಉಳಿಸಬೇಕೆಂದು ತೀರ್ಮಾನಿಸಲಾಗಿದೆ. ನೆರೆ ರಾಜ್ಯಗಳಿಗೆ ಅವರ ಪಾಲಿನ 25 ಟಿಎಂಸಿ ಅಡಿ ನೀರು ಕೊಡಲಾಗಿದೆ. ಇನ್ನು 90 ಟಿಎಂಸಿ ಅಡಿ ಕೊಡಬೇಕಿದೆ. ರೈತರು ಗಾಬರಿಯಾಗುವ ಅಗತ್ಯವಿಲ್ಲ. ಮೂರು ಸರ್ಕಾರ ಒಟ್ಟಾಗಿ ಸಮಸ್ಯೆ ನಿವಾರಿಸಲಿವೆ. ರೈತರನ್ನು ಬದುಕಿಸಲು ಬೇಕಾದ ಕ್ರಮ ತೆಗೆದುಕೊಳ್ಳಲಾಗುವುದು. ಭದ್ರತೆ ದೃಷ್ಟಿಯಿಂದ ಜಲಾಶಯದಿಂದ ಎರಡು ಕಿ.ಮೀ.ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗುತ್ತಿದ್ದು, ಜನಪ್ರತಿನಿಧಿಗಳು ಸೇರಿ ಇತರರನ್ನು ಬಿಡುವಂತಿಲ್ಲ ಎಂದು ಹೇಳಿದರು.
ಇದು ತಾಂತ್ರಿಕ ವಿಷಯವಾಗಿದ್ದು, ಜಲಾಶಯ ರಾಜ್ಯದ ಸಂಪತ್ತು. ಇದನ್ನು ಉಳಿಸಬೇಕಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ. ಕೊಚ್ಚಿ ಹೋಗಿರುವ ತುಂಗಭದ್ರಾ ಜಲಾಶಯದ ಗೇಟ್ ಅಳವಡಿಕೆ ಕಾರ್ಯ ವೇಗ ಪಡೆದುಕೊಂಡಿದ್ದು. ಬೇರೆ ಟೀಕೆ ಟಿಪ್ಪಣೆಗಿಂತ ಮೊದಲು ಗೇಟ್ ಸರಿಪಡಿಸುವುದು ನಮ್ಮ ಆದ್ಯತೆಯಾಗಿದೆ ಎಂದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…