ಕೊಪ್ಪಳ: ಹೊಸಪೇಟೆಯ ತುಂಗಭದ್ರಾ ಜಲಾಶಯದ 19ನೇ ಗೇಟ್ ಕೊಚ್ಚಿ ಹೋಗಿರುವ ಹಿನ್ನೆಲೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಗೇಟ್ ದುರಸ್ತಿಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೊಪ್ಪಳ, ರಾಯಚೂರು, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ 12 ಲಕ್ಷ ಎಕರೆ ನೀರಾವರಿಗೆ ಜಲಾಶಯದ ನೀರು ಅಗತ್ಯವಾಗಿ ಬೇಕಾಗಿದೆ. ಶನಿವಾರ ರಾತ್ರಿ ಹತ್ತು ಗೇಟ್ ಮೂಲಕ ನೀರು ಬಿಟ್ಟಾಗ ಅದರಲ್ಲಿ 19ನೇ ಗೇಟ್ ಕಳಚಿಕೊಂಡಿದೆ. ತಕ್ಷಣ ನಮ್ಮ ಅಧಿಕಾರಿಗಳು, ಜನಪ್ರನಿಧಿಗಳು ಚರ್ಚಿಸಿ ಅನುಮತಿ ಪಡೆದು ತಕ್ಷಣ ಎಲ್ಲ ಗೇಟ್ ಮೂಲಕ ನೀರು ಹೊರ ಬಿಡಲಾಗಿದೆ ಎಂದರು
ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ ನಾಲ್ಕು ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಗೇಟ್ ದುರಸ್ತಿ ಜವಾಬ್ದಾರಿ ಅನುಭವಿ ಸಂಸ್ಥೆಗೆ ವಹಿಸಲಾಗಿದೆ. ನಾರಾಯಣ ಎಂಜಿನಿಯರಿಂಗ್ ಹಾಗೂ ಹಿಂದುಸ್ಥಾನ ಕಂಪನಿಗೆ ಜಲಾಶಯದ ವಿನ್ಯಾಸ ನೀಡಲಾಗಿದೆ. ತಾಂತ್ರಿಕ ತಂಡದವರು ನಿನ್ನೆ ರಾತ್ರಿಯೇ ಇಲ್ಲಿಗೆ ಬಂದು ತಕ್ಷಣ ಕೆಲಸ ಆರಂಭಿಸಿದ್ದಾರೆ ಎಂದು ಮಾಹಿತಿ ನೀಡಿದರು.
ರೈತರಿಗೆ ಒಂದು ಬೆಳೆಗೆ ನೀರು ಉಳಿಸಬೇಕೆಂದು ತೀರ್ಮಾನಿಸಲಾಗಿದೆ. ನೆರೆ ರಾಜ್ಯಗಳಿಗೆ ಅವರ ಪಾಲಿನ 25 ಟಿಎಂಸಿ ಅಡಿ ನೀರು ಕೊಡಲಾಗಿದೆ. ಇನ್ನು 90 ಟಿಎಂಸಿ ಅಡಿ ಕೊಡಬೇಕಿದೆ. ರೈತರು ಗಾಬರಿಯಾಗುವ ಅಗತ್ಯವಿಲ್ಲ. ಮೂರು ಸರ್ಕಾರ ಒಟ್ಟಾಗಿ ಸಮಸ್ಯೆ ನಿವಾರಿಸಲಿವೆ. ರೈತರನ್ನು ಬದುಕಿಸಲು ಬೇಕಾದ ಕ್ರಮ ತೆಗೆದುಕೊಳ್ಳಲಾಗುವುದು. ಭದ್ರತೆ ದೃಷ್ಟಿಯಿಂದ ಜಲಾಶಯದಿಂದ ಎರಡು ಕಿ.ಮೀ.ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗುತ್ತಿದ್ದು, ಜನಪ್ರತಿನಿಧಿಗಳು ಸೇರಿ ಇತರರನ್ನು ಬಿಡುವಂತಿಲ್ಲ ಎಂದು ಹೇಳಿದರು.
ಇದು ತಾಂತ್ರಿಕ ವಿಷಯವಾಗಿದ್ದು, ಜಲಾಶಯ ರಾಜ್ಯದ ಸಂಪತ್ತು. ಇದನ್ನು ಉಳಿಸಬೇಕಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ. ಕೊಚ್ಚಿ ಹೋಗಿರುವ ತುಂಗಭದ್ರಾ ಜಲಾಶಯದ ಗೇಟ್ ಅಳವಡಿಕೆ ಕಾರ್ಯ ವೇಗ ಪಡೆದುಕೊಂಡಿದ್ದು. ಬೇರೆ ಟೀಕೆ ಟಿಪ್ಪಣೆಗಿಂತ ಮೊದಲು ಗೇಟ್ ಸರಿಪಡಿಸುವುದು ನಮ್ಮ ಆದ್ಯತೆಯಾಗಿದೆ ಎಂದರು.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…