ರಾಜ್ಯ

ತುಂಗಭದ್ರಾ ಡ್ಯಾಂ ಗೇಟ್‌ ಕಟ್:‌ ರೈತರು ಗಾಬರಿಯಾಗುವ ಅಂತಕವಿಲ್ಲ; ಡಿಕೆ ಶಿವಕುಮಾರ್

ಕೊಪ್ಪಳ: ಹೊಸಪೇಟೆಯ ತುಂಗಭದ್ರಾ ಜಲಾಶಯದ 19ನೇ ಗೇಟ್ ಕೊಚ್ಚಿ ಹೋಗಿರುವ ಹಿನ್ನೆಲೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಗೇಟ್ ದುರಸ್ತಿಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೊಪ್ಪಳ, ರಾಯಚೂರು, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ 12 ಲಕ್ಷ ಎಕರೆ ನೀರಾವರಿಗೆ ಜಲಾಶಯದ ನೀರು ಅಗತ್ಯವಾಗಿ ಬೇಕಾಗಿದೆ. ಶನಿವಾರ ರಾತ್ರಿ ಹತ್ತು ಗೇಟ್ ಮೂಲಕ ನೀರು ಬಿಟ್ಟಾಗ ಅದರಲ್ಲಿ 19ನೇ ಗೇಟ್ ಕಳಚಿಕೊಂಡಿದೆ. ತಕ್ಷಣ ನಮ್ಮ ಅಧಿಕಾರಿಗಳು, ಜನಪ್ರನಿಧಿಗಳು ಚರ್ಚಿಸಿ ಅನುಮತಿ ಪಡೆದು ತಕ್ಷಣ ಎಲ್ಲ ಗೇಟ್ ಮೂಲಕ ನೀರು ಹೊರ ಬಿಡಲಾಗಿದೆ ಎಂದರು

ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ ನಾಲ್ಕು ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಗೇಟ್ ದುರಸ್ತಿ ಜವಾಬ್ದಾರಿ ಅನುಭವಿ ಸಂಸ್ಥೆಗೆ ವಹಿಸಲಾಗಿದೆ. ನಾರಾಯಣ ಎಂಜಿನಿಯರಿಂಗ್ ಹಾಗೂ ಹಿಂದುಸ್ಥಾನ ಕಂಪನಿಗೆ ಜಲಾಶಯದ ವಿನ್ಯಾಸ ನೀಡಲಾಗಿದೆ. ತಾಂತ್ರಿಕ ತಂಡದವರು ನಿನ್ನೆ ರಾತ್ರಿಯೇ ಇಲ್ಲಿಗೆ ಬಂದು ತಕ್ಷಣ ಕೆಲಸ ಆರಂಭಿಸಿದ್ದಾರೆ ಎಂದು ಮಾಹಿತಿ ನೀಡಿದರು.

ರೈತರಿಗೆ ಒಂದು ಬೆಳೆಗೆ ನೀರು ಉಳಿಸಬೇಕೆಂದು ತೀರ್ಮಾನಿಸಲಾಗಿದೆ. ನೆರೆ ರಾಜ್ಯಗಳಿಗೆ ಅವರ ಪಾಲಿನ 25 ಟಿಎಂಸಿ ಅಡಿ ನೀರು ಕೊಡಲಾಗಿದೆ. ಇನ್ನು 90 ಟಿಎಂಸಿ ಅಡಿ ಕೊಡಬೇಕಿದೆ. ರೈತರು ಗಾಬರಿಯಾಗುವ ಅಗತ್ಯವಿಲ್ಲ. ಮೂರು ಸರ್ಕಾರ ಒಟ್ಟಾಗಿ ಸಮಸ್ಯೆ ನಿವಾರಿಸಲಿವೆ. ರೈತರನ್ನು ಬದುಕಿಸಲು ಬೇಕಾದ ಕ್ರಮ ತೆಗೆದುಕೊಳ್ಳಲಾಗುವುದು. ಭದ್ರತೆ ದೃಷ್ಟಿಯಿಂದ ಜಲಾಶಯದಿಂದ ಎರಡು ಕಿ.ಮೀ.ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗುತ್ತಿದ್ದು, ಜನಪ್ರತಿನಿಧಿಗಳು ಸೇರಿ ಇತರರನ್ನು ಬಿಡುವಂತಿಲ್ಲ ಎಂದು ಹೇಳಿದರು.

ಇದು ತಾಂತ್ರಿಕ ವಿಷಯವಾಗಿದ್ದು, ಜಲಾಶಯ ರಾಜ್ಯದ ಸಂಪತ್ತು. ಇದನ್ನು ಉಳಿಸಬೇಕಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ. ಕೊಚ್ಚಿ ಹೋಗಿರುವ ತುಂಗಭದ್ರಾ ಜಲಾಶಯದ ಗೇಟ್ ಅಳವಡಿಕೆ ಕಾರ್ಯ ವೇಗ ಪಡೆದುಕೊಂಡಿದ್ದು. ಬೇರೆ ಟೀಕೆ ಟಿಪ್ಪಣೆಗಿಂತ ಮೊದಲು ಗೇಟ್ ಸರಿಪಡಿಸುವುದು ನಮ್ಮ ಆದ್ಯತೆಯಾಗಿದೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

14 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago