ಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ 19ರ ಮೊದಲ ಎಲಿಮೆಂಟ್ ಅಳವಡಿಕೆ ಶುಕ್ರವಾರ ಸಕ್ಸಸ್ ಆಗಿದ್ದರಿಂದ ಜನಪ್ರತಿನಿಧಿಗಳು ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.
ಸತತ ಎರಡು ದಿನಗಳಿಂದ ಈ ಕಾರ್ಯಚರಣೆ ನಡೆಯುತ್ತಿತ್ತು, ಅಳವಡಿಕೆಗೆ ಅಡ್ಡಿಯಾಗಿ ಸ್ಕೈವಾಕ್ ತೆರವು ಮಾಡಿದ ಬೆನ್ನಲ್ಲೇ ಮೊದಲ ಹಂತದ ಎಲಿಮೆಂಟ್ ಅಳವಡಿಕೆ ಯಶಸ್ವಿಯಾಗಿದೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ಸಂಸದ ರಾಜಶೇಖರ್ ಹಿಟ್ನಾಳ, ಸಚಿವ ಜಮೀರ್ ಅಹಮದ್ ಖಾನ್ ಸೇರಿದಂತೆ ಅನೇಕರು ಸಿಹಿ ಹಂಚಿ ಖುಷಿಪಟ್ಟರು.
ಎಲ್ಲರೂ ಸೇರಿ ಜಲಾಶಯಗಳ ಗೇಟ್ ಮತ್ತು ಸುರಕ್ಷತಾ ತಜ್ಞ ಕನ್ನಯ್ಯ ನಾಯ್ಡು ಅವರಿಗೆ ಕೈಕುಲಕಿ ಅಭಿನಂದನೆ ಸಲ್ಲಿಸಿದರು.
ಸಿಎಂ ಹಾಗೂ ಡಿಸಿಎಂ ಕೂಡಾ ಕಾರ್ಯಾಚರಣೆಯನ್ನು ಲೈವ್ ಆಗಿ ನೋಡಿದ್ದಾರೆ. ನಾಳೆ ಸಂಜೆಯವರೆಗೆ ಉಳಿದ ಎಲಿಮೆಂಟ್ಗಳನ್ನು ಅಳವಡಿಸಲಾಗುತ್ತದೆ. ರೈತರ ಬೆಳಗೆ ನೀರು ಕೊಡುವ ಕೆಲಸ ಮಾಡುತ್ತೇವೆ ಎಂದು ಸಚಿವ ಶಿವರಾಜ್ ತಂಗಡಗಿ ಭರವಸೆ ನೀಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…