ಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ 19ರ ಮೊದಲ ಎಲಿಮೆಂಟ್ ಅಳವಡಿಕೆ ಶುಕ್ರವಾರ ಸಕ್ಸಸ್ ಆಗಿದ್ದರಿಂದ ಜನಪ್ರತಿನಿಧಿಗಳು ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.
ಸತತ ಎರಡು ದಿನಗಳಿಂದ ಈ ಕಾರ್ಯಚರಣೆ ನಡೆಯುತ್ತಿತ್ತು, ಅಳವಡಿಕೆಗೆ ಅಡ್ಡಿಯಾಗಿ ಸ್ಕೈವಾಕ್ ತೆರವು ಮಾಡಿದ ಬೆನ್ನಲ್ಲೇ ಮೊದಲ ಹಂತದ ಎಲಿಮೆಂಟ್ ಅಳವಡಿಕೆ ಯಶಸ್ವಿಯಾಗಿದೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ಸಂಸದ ರಾಜಶೇಖರ್ ಹಿಟ್ನಾಳ, ಸಚಿವ ಜಮೀರ್ ಅಹಮದ್ ಖಾನ್ ಸೇರಿದಂತೆ ಅನೇಕರು ಸಿಹಿ ಹಂಚಿ ಖುಷಿಪಟ್ಟರು.
ಎಲ್ಲರೂ ಸೇರಿ ಜಲಾಶಯಗಳ ಗೇಟ್ ಮತ್ತು ಸುರಕ್ಷತಾ ತಜ್ಞ ಕನ್ನಯ್ಯ ನಾಯ್ಡು ಅವರಿಗೆ ಕೈಕುಲಕಿ ಅಭಿನಂದನೆ ಸಲ್ಲಿಸಿದರು.
ಸಿಎಂ ಹಾಗೂ ಡಿಸಿಎಂ ಕೂಡಾ ಕಾರ್ಯಾಚರಣೆಯನ್ನು ಲೈವ್ ಆಗಿ ನೋಡಿದ್ದಾರೆ. ನಾಳೆ ಸಂಜೆಯವರೆಗೆ ಉಳಿದ ಎಲಿಮೆಂಟ್ಗಳನ್ನು ಅಳವಡಿಸಲಾಗುತ್ತದೆ. ರೈತರ ಬೆಳಗೆ ನೀರು ಕೊಡುವ ಕೆಲಸ ಮಾಡುತ್ತೇವೆ ಎಂದು ಸಚಿವ ಶಿವರಾಜ್ ತಂಗಡಗಿ ಭರವಸೆ ನೀಡಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…