ರಾಜ್ಯ

ತುಂಗಭದ್ರಾ: ಗೇಟ್‌ ಅಳವಡಿಕೆ ಮೊದಲ ಎಲಿಮೆಂಟ್‌ ಯಶಸ್ವಿ; ಸಿಹಿ ಹಂಚಿ ಸಂಭ್ರಮ

ಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ 19ರ ಮೊದಲ ಎಲಿಮೆಂಟ್‌ ಅಳವಡಿಕೆ ಶುಕ್ರವಾರ ಸಕ್ಸಸ್‌ ಆಗಿದ್ದರಿಂದ ಜನಪ್ರತಿನಿಧಿಗಳು ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.

ಸತತ ಎರಡು ದಿನಗಳಿಂದ ಈ ಕಾರ್ಯಚರಣೆ ನಡೆಯುತ್ತಿತ್ತು, ಅಳವಡಿಕೆಗೆ ಅಡ್ಡಿಯಾಗಿ ಸ್ಕೈವಾಕ್‌ ತೆರವು ಮಾಡಿದ ಬೆನ್ನಲ್ಲೇ ಮೊದಲ ಹಂತದ ಎಲಿಮೆಂಟ್‌ ಅಳವಡಿಕೆ ಯಶಸ್ವಿಯಾಗಿದೆ.


ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್‌ ತಂಗಡಗಿ, ಸಂಸದ ರಾಜಶೇಖರ್‌ ಹಿಟ್ನಾಳ, ಸಚಿವ ಜಮೀರ್‌ ಅಹಮದ್‌ ಖಾನ್‌ ಸೇರಿದಂತೆ ಅನೇಕರು ಸಿಹಿ ಹಂಚಿ ಖುಷಿಪಟ್ಟರು.

ಎಲ್ಲರೂ ಸೇರಿ ಜಲಾಶಯಗಳ ಗೇಟ್‌ ಮತ್ತು ಸುರಕ್ಷತಾ ತಜ್ಞ ಕನ್ನಯ್ಯ ನಾಯ್ಡು ಅವರಿಗೆ ಕೈಕುಲಕಿ ಅಭಿನಂದನೆ ಸಲ್ಲಿಸಿದರು.

ಸಿಎಂ ಹಾಗೂ ಡಿಸಿಎಂ ಕೂಡಾ ಕಾರ್ಯಾಚರಣೆಯನ್ನು ಲೈವ್‌ ಆಗಿ ನೋಡಿದ್ದಾರೆ. ನಾಳೆ ಸಂಜೆಯವರೆಗೆ ಉಳಿದ ಎಲಿಮೆಂಟ್‌ಗಳನ್ನು ಅಳವಡಿಸಲಾಗುತ್ತದೆ. ರೈತರ ಬೆಳಗೆ ನೀರು ಕೊಡುವ ಕೆಲಸ ಮಾಡುತ್ತೇವೆ ಎಂದು ಸಚಿವ ಶಿವರಾಜ್‌ ತಂಗಡಗಿ ಭರವಸೆ ನೀಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago