ಹೊಸಪೇಟೆ: ತುಂಗಭದ್ರಾ ಅಣೆಕಟ್ಟೆಯನ್ನು ಗರಿಷ್ಠ 6.5 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಬಹುದಾದ ರೀತಿಯಲ್ಲಿ ನಿರ್ಮಿಸಿಲಾಗಿದೆ. ಹೀಗಾಗಿ, ನೀರು ಬಿಡುಗಡೆ ಮಾಡುವ ವಿಚಾರದಲ್ಲಿ ನದಿ ಪಾತ್ರದ ಜನರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ತುಂಗಭದ್ರಾ ಜಲಾಶಯ ಮಂಡಳಿಯು ಭರವಸೆ ನೀಡಿದೆ.
ಈ ಬಗ್ಗೆ ಇಂದು(ಆ.11) ಲಿಖಿತ ಹೇಳಿಕೆ ಬಿಡುಗಡೆ ಮಾಡಿರುವ ಜಲಾಶಯ ಮಂಡಳಿ, 1992ರ ಡಿಸೆಂಬರ್ನಲ್ಲೂ ಡ್ಯಾಂನಿಂದ 3.65 ಲಕ್ಷ ಕ್ಯೂಸೆಕ್ಸ್ ನೀರು ಹೊರಬಿಡಲಾಗಿತ್ತು. ಆವಾಗಲೂ ಯಾವುದೇ ತೊಂದರೆ ಆಗಿಲ್ಲ. ಸದ್ಯ ಮಳೆಯ ಪ್ರಮಾಣವೂ ತಗ್ಗಿದೆ, ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದೆ.
ಅಣೆಕಟ್ಟೆಯ ಒಟ್ಟಾರೆ ಉದ್ದ 1,798.28 ಮೀಟರ್. ಈ ಪೈಕಿ ನೀರನ್ನು ತಡೆಹಿಡಿಯುವ ತಡೆಗೋಡೆ ಬಲಭಾಗದ ಉದ್ದ 1,097.28 ಮೀಟರ್ ಹಾಗೂ ಎಡಭಾಗದ ಉದ್ದ 483.73 ಮೀಟರ್ ಇದೆ. 33 ಕ್ರಸ್ಟ್ಗೇಟ್ ನಲ್ಲಿ 701 ಮೀಟರ್ನಷ್ಟು ಉದ್ದವಿದೆ. ಈ ಕ್ರಸ್ಟ್ಗೇಟ್ಗಳನ್ನು 1955ರಲ್ಲಿ ಅಳವಡಿಸಲಾಗಿದೆ. ಜಲಾಶಯದ ವ್ಯಾಪ್ತಿ 378.10 ಚದರ ಕಿ.ಮೀ ಒಳಗೊಂಡಿದೆ. ಇಂತಹ ಅಣೆಕಟ್ಟೆಯಲ್ಲಿ ಅಗತ್ಯಕ್ಕೆ ತಕ್ಕಂತೆ ಕ್ರಸ್ಟ್ಗೇಟ್ಗಳನ್ನು ಮೇಲಕ್ಕೆ ಎತ್ತಬಹುದಾದ ಹಾಗೂ ಕೆಳಕ್ಕೆ ಇಳಿಸಬಹುದಾದ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಈ ಎಲ್ಲ ಗೇಟ್ಗಳಿಗೆ ಕಳೆದ ಮೇ ತಿಂಗಳಲ್ಲೇ ಗ್ರೀಸಿಂಗ್, ಆಯಿಲ್ ಫಿಲ್ಲಿಂಗ್ಗಳೆನ್ನೆಲ್ಲ ನಡೆಸಲಾಗಿದೆ ಎಂದು ಜಲಾಶಯ ಮಂಡಳಿಯು ಹೇಳಿದೆ.
ಒಟ್ಟಾರೆ 33ಕ್ರಸ್ಟ್ಗೇಟ್ನಲ್ಲಿ 16 ಗೇಟ್ ಆಂಧ್ರದ್ದು, 17ರಿಂದ 33 ಕರ್ನಾಟಕದ್ದು. ಸದ್ಯ 19 ಗೇಟ್ ಕೊಚ್ಚಿಕೊಂಡು ಹೋಗಿದ್ದರೂ, ಎರಡೂ ರಾಜ್ಯದ ಅಧಿಕಾರಿಗಳು ಹಾಗೂ ಎಂಜಿನಿಯರ್ಗಳು ಒಟ್ಟಾಗಿ ಸಮಾಲೋಚನೆ ನಡೆಸಿ ದುರಸ್ತಿ ಕಾರ್ಯಕ್ಕೆ ಮುಂದಾಗಿದ್ದಾರೆ.
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…