ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.
ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಜೀವನಾಡಿಯಾಗಿರುವ ತುಂಗಭದ್ರಾ ಅಣೆಕಟ್ಟೆಯಲ್ಲಿ ನೂತನವಾಗಿ ಅಳವಡಿಸಲಾದ ೩೩ ಕ್ರೆಸ್ಟ್ಗೇಟ್ಗಳನ್ನು ಗುರುವಾರ ಲೋಕಾರ್ಪಣೆ ಮಾಡಲಾಯಿತು. ಈ ಕಾರ್ಯಕ್ರಮ ಐತಿಹಾಸಿಕ ಮಹತ್ವ ಪಡೆದುಕೊಂಡಿದೆ.
ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಕೇಂದ್ರ ಸಚಿವ ಸಿ.ಆರ್.ಪಾಟೀಲ್, ಕರ್ನಾಟಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು, ತೆಲಂಗಾಣದ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಅವರುಗಳು ಜಲಾಶಯದ ನಾಲ್ಕು ಕ್ರೆಸ್ಟ್ ಗೇಟ್ಗಳನ್ನು ಒಂದೇ ವೇಳೆ ತೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಡ್ಯಾಂ ಮೇಲ್ಭಾಗಕ್ಕೆ ಶಾಸಕರು ಹಾಗೂ ಸಂಸದರಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿತ್ತು.
೨೦೨೪ರ ಆಗಸ್ಟ್ ೧೦ರಂದು ರಾತ್ರಿ ತುಂಗಭದ್ರಾ ಅಣೆಕಟ್ಟೆಯ ೧೯ನೇ ಕ್ರೆಸ್ಟ್ಗೇಟ್ ಕೊಚ್ಚಿಕೊಂಡು ಹೋಗಿತ್ತು. ಈ ಘಟನೆ ದೇಶಾದ್ಯಂತ ಆತಂಕ ಸೃಷ್ಟಿಸಿತ್ತು. ಪರಿಣಾಮವಾಗಿ ಅಪಾರ ಪ್ರಮಾಣದ ನೀರು ನದಿಗೆ ಹರಿದು ಹೋಗಿದ್ದಲ್ಲದೇ ರೈತರಲ್ಲಿ ಕಳವಳ ಮೂಡಿಸಿತ್ತು. ಈ ಘಟನೆ ನಡೆದ ತಕ್ಷಣ ಅಂದಿನ ಜಲಸಂಪನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ತುರ್ತು ಕ್ರಮ ಕೈಗೊಂಡಿದ್ದರು. ತಜ್ಞರ ಸಲಹೆ ಮೇರೆಗೆ ಸ್ಟಾಪ್ಲಾಗ್ ಗೇಟ್ ಅಳವಡಿಸಿ ನೀರಿನ ಹರಿವನ್ನು ನಿಯಂತ್ರಿಸಲಾಗಿತ್ತು. ಆದಾಗ್ಯೂ ಸುಮಾರು ೩೫ ಟಿಎಂಸಿ ಅಡಿ ನೀರು ನದಿಗೆ ಹರಿದು ಹೋಗಿತ್ತು. ನಂತರ ಸರ್ಕಾರ ಎಲ್ಲ ೩೩ ಕ್ರೆಸ್ಟ್ಗೇಟ್ಗಳನ್ನು ಬದಲಿಸುವ ಮಹತ್ವದ ನಿರ್ಧಾರ ಕೈಗೊಂಡಿತ್ತು.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…