ಬೆಂಗಳೂರು : ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಟನಲ್ ರಸ್ತೆವಿರೋಧಿಸಿ ಬಿಜೆಪಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಉಪಮುಖ್ಯಮಂತ್ರಿಗಳು ಈಗಾಗಲೇ ಉತ್ತರ ನೀಡಿದ್ದಾರೆ. ಯೋಜನೆಯ ಬಗ್ಗೆ ವಿರೋಧಪಕ್ಷದ ಕಳವಳಗಳನ್ನು ಪರಿಶೀಲಿಸಿ ಒಮ್ಮತಕ್ಕೆ ಬರಲು ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದರು.
ಇದನ್ನು ಓದಿ: ಲಾಲ್ಬಾಗ್ ಉಳಿಸಲು ನವೆಂಬರ್ 2 ರಂದು ಪ್ರತಿಭಟನೆ : ಆರ್.ಅಶೋಕ
ಯೋಜನೆಗೆ ಸಾರ್ವಜನಿಕರ ವಿರೋಧವಿಲ್ಲ
ಯೋಜನೆ ಬಗ್ಗೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿಲ್ಲ. ಆದರೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ. ಟ್ರಾಫಿಕ್ ಸಮಸ್ಯೆಯನ್ನು ಹೋಗಲಾಡಿಸುವ ಈ ಯೋಜನೆಗೆ ವಿರೋಧ ಏಕೆ ವ್ಯಕ್ತವಾಗಬೇಕು? ಇದೇ ರೀತಿಯ ಟನಲ್ ಯೋಜನೆಗಳನ್ನು ಅನೇಕ ದೇಶದಲ್ಲಿಯೂ ಕೈಗೊಳ್ಳಲಾಗಿದೆ. ಅಲ್ಲಿನ ಜನರು ಇದನ್ನು ವಿರೋಧಿಸಿಲ್ಲ ಎಂದರು.
ಟನಲ್ ಯೋಜನೆಯನ್ನು ಶ್ರೀಮಂತರನ್ನು ಗಮನದಲ್ಲಿರಿಸಿಕೊಂಡು ಮಾಡಲಾಗಿದೆ ಎಂದು ದೂರು ಕೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಟನಲ್ ಯೋಜನೆಯನ್ನು ಕಾರು, ಬಸ್ ,ದ್ವಿಚಕ್ರ ವಾಹನ, ಕಾಲ್ನಡಿಗೆಯವರಿಗೂ ಅನುಕೂಲವಾಗಲೆಂದು ಕೈಗೊಳ್ಳಲಾಗುತ್ತಿದೆ ಎಂದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…