ರಾಜ್ಯ

ಟನಲ್ ರಸ್ತೆ ಯೋಜನೆ ; ಬಿಜೆಪಿ ವಿರೋಧ ರಾಜಕೀಯ ಪ್ರೇರಿತ : ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು : ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಟನಲ್ ರಸ್ತೆವಿರೋಧಿಸಿ ಬಿಜೆಪಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಉಪಮುಖ್ಯಮಂತ್ರಿಗಳು ಈಗಾಗಲೇ ಉತ್ತರ ನೀಡಿದ್ದಾರೆ. ಯೋಜನೆಯ ಬಗ್ಗೆ ವಿರೋಧಪಕ್ಷದ ಕಳವಳಗಳನ್ನು ಪರಿಶೀಲಿಸಿ ಒಮ್ಮತಕ್ಕೆ ಬರಲು ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದರು.

ಇದನ್ನು ಓದಿ: ಲಾಲ್‌ಬಾಗ್‌ ಉಳಿಸಲು ನವೆಂಬರ್‌ 2 ರಂದು ಪ್ರತಿಭಟನೆ : ಆರ್.ಅಶೋಕ

ಯೋಜನೆಗೆ ಸಾರ್ವಜನಿಕರ ವಿರೋಧವಿಲ್ಲ
ಯೋಜನೆ ಬಗ್ಗೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿಲ್ಲ. ಆದರೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ. ಟ್ರಾಫಿಕ್ ಸಮಸ್ಯೆಯನ್ನು ಹೋಗಲಾಡಿಸುವ ಈ ಯೋಜನೆಗೆ ವಿರೋಧ ಏಕೆ ವ್ಯಕ್ತವಾಗಬೇಕು? ಇದೇ ರೀತಿಯ ಟನಲ್ ಯೋಜನೆಗಳನ್ನು ಅನೇಕ ದೇಶದಲ್ಲಿಯೂ ಕೈಗೊಳ್ಳಲಾಗಿದೆ. ಅಲ್ಲಿನ ಜನರು ಇದನ್ನು ವಿರೋಧಿಸಿಲ್ಲ ಎಂದರು.
ಟನಲ್ ಯೋಜನೆಯನ್ನು ಶ್ರೀಮಂತರನ್ನು ಗಮನದಲ್ಲಿರಿಸಿಕೊಂಡು ಮಾಡಲಾಗಿದೆ ಎಂದು ದೂರು ಕೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಟನಲ್ ಯೋಜನೆಯನ್ನು ಕಾರು, ಬಸ್ ,ದ್ವಿಚಕ್ರ ವಾಹನ, ಕಾಲ್ನಡಿಗೆಯವರಿಗೂ ಅನುಕೂಲವಾಗಲೆಂದು ಕೈಗೊಳ್ಳಲಾಗುತ್ತಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

3 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

3 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

3 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

4 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

5 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

5 hours ago