ಬೆಂಗಳೂರು : ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಟನಲ್ ರಸ್ತೆವಿರೋಧಿಸಿ ಬಿಜೆಪಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಉಪಮುಖ್ಯಮಂತ್ರಿಗಳು ಈಗಾಗಲೇ ಉತ್ತರ ನೀಡಿದ್ದಾರೆ. ಯೋಜನೆಯ ಬಗ್ಗೆ ವಿರೋಧಪಕ್ಷದ ಕಳವಳಗಳನ್ನು ಪರಿಶೀಲಿಸಿ ಒಮ್ಮತಕ್ಕೆ ಬರಲು ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದರು.
ಇದನ್ನು ಓದಿ: ಲಾಲ್ಬಾಗ್ ಉಳಿಸಲು ನವೆಂಬರ್ 2 ರಂದು ಪ್ರತಿಭಟನೆ : ಆರ್.ಅಶೋಕ
ಯೋಜನೆಗೆ ಸಾರ್ವಜನಿಕರ ವಿರೋಧವಿಲ್ಲ
ಯೋಜನೆ ಬಗ್ಗೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿಲ್ಲ. ಆದರೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ. ಟ್ರಾಫಿಕ್ ಸಮಸ್ಯೆಯನ್ನು ಹೋಗಲಾಡಿಸುವ ಈ ಯೋಜನೆಗೆ ವಿರೋಧ ಏಕೆ ವ್ಯಕ್ತವಾಗಬೇಕು? ಇದೇ ರೀತಿಯ ಟನಲ್ ಯೋಜನೆಗಳನ್ನು ಅನೇಕ ದೇಶದಲ್ಲಿಯೂ ಕೈಗೊಳ್ಳಲಾಗಿದೆ. ಅಲ್ಲಿನ ಜನರು ಇದನ್ನು ವಿರೋಧಿಸಿಲ್ಲ ಎಂದರು.
ಟನಲ್ ಯೋಜನೆಯನ್ನು ಶ್ರೀಮಂತರನ್ನು ಗಮನದಲ್ಲಿರಿಸಿಕೊಂಡು ಮಾಡಲಾಗಿದೆ ಎಂದು ದೂರು ಕೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಟನಲ್ ಯೋಜನೆಯನ್ನು ಕಾರು, ಬಸ್ ,ದ್ವಿಚಕ್ರ ವಾಹನ, ಕಾಲ್ನಡಿಗೆಯವರಿಗೂ ಅನುಕೂಲವಾಗಲೆಂದು ಕೈಗೊಳ್ಳಲಾಗುತ್ತಿದೆ ಎಂದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…