ರಾಜ್ಯ

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದ್ದಾರೆ.

ನಟ ವಿಜಯ್ ಅವರ ಅಭಿಮಾನಿ ಕೃಷ್ಣಮೂರ್ತಿ ಮಾತನಾಡಿ, ತಮಿಳುನಾಡಿನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ನಟ ಕಂ ರಾಜಕಾರಣಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ 108 ಸ್ಥಾನಗಳನ್ನು ಪಡೆಯುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಚುನಾವಣಾ ಪ್ರಣಾಳಿಕೆಯಲ್ಲಿ ನಟ ವಿಜಯ್ ಅವರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅಭಿವೃದ್ಧಿ ಕಾರ್ಯಗಳು ಮುಂದುವರಿಸಲು ಪಣತೊಟ್ಟಿದ್ದಾರೆ. ಈ ಹಿನ್ನೆಲೆ ವಿವಿಧ ಪಕ್ಷಗಳು ಅವರಿಗೆ ಬೆಂಬಲವಾಗಿ ನಿಂತು ಉತ್ತಮ ಸರ್ಕಾರ ರಚನೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು.

ವಿಜಯ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಾ ಅಂಶಗಳನ್ನು ಅನುಷ್ಠಾನಕ್ಕೆ ತರಲಿದ್ದಾರೆ. ಈ ನಿಟ್ಟಿನಲ್ಲಿ ಅವರ ವಿಜಯೋತ್ಸವವನ್ನು ಅವರ ಅಭಿಮಾನಿಗಳಾಗಿ ನಾವು ಸಹ ನಮ್ಮ ಗ್ರಾಮದಲ್ಲಿ ಆಚರಣೆ ಮಾಡುತಿದ್ದೇವೆ ಎಂದು ತಿಳಿಸಿದರು.

ಇದೆ ವೇಳೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ ಕೃಷ್ಣಮೂರ್ತಿ ನಂದಕುಮಾರ್ ಸೇರಿದಂತೆ ಅಭಿಮಾನಿ ಬಳಗದವರು ಸಂಭ್ರಮಾಚರಣೆ ಮಾಡಿ ಕೇಕ್ ಕತ್ತರಿಸಿ ಸಿಹಿ ವಿತರಿಸಿದರು.

ಆಂದೋಲನ ಡೆಸ್ಕ್

Recent Posts

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

19 mins ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

33 mins ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

57 mins ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

1 hour ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

1 hour ago

ಬಿಹಾರ | ಸಂಪುಟ ಸೇರಿದ ನಿತೀಶ್‌ ಪುತ್ರ ನಿಶಾಂತ್‌ ; ಸಚಿವರಾಗಿ 32 ಮಂದಿ ಪ್ರಮಾಣ

ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್‌ಡಿಎ ನಾಯಕರು ಸಚಿವರಾಗಿ…

3 hours ago