ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ಮಹೇಶ್ಶೆಟ್ಟಿ ತಿಮರೋಡಿ ಆರೋಪಿ ಚಿನ್ನಯ್ಯನ ಜೊತೆ ಮಾತನಾಡಿದ್ದ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿದೆ. ಇದೀಗ ಅದರ ಮುಂದುವರಿದ ಭಾಗ ಬಹಿರಂಗಗೊಂಡಿದೆ.
ದೂರುದಾರ ಚಿನ್ನಯ್ಯ, ಸೌಜನ್ಯಳ ಹೋರಾಟಗಾರರನ್ನು ಭೇಟಿ ಮಾಡಿದ ವೇಳೆ ಮಾತಾಡಿದ್ದಾರೆ ಎನ್ನಲಾಗಿರುವ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 2 ನಿಮಿಷಗಳ 2ನೇ ವಿಡಿಯೋದಲ್ಲಿ ಕೆಲವು ಸ್ಫೋಟಕ ಮಾಹಿತಿ ಹೊರ ಬಿದ್ದಿದೆ. ಮಹೇಶ್ ತಿಮರೋಡಿ ಮನೆಯಲ್ಲಿ ಚಿನ್ನಯ್ಯ ಮಾತುಕತೆ ನಡೆಸಿದ ವಿಡಿಯೋ ಇದಾಗಿದೆ.
ಕಳೆದ 2023ರ ಆಗಸ್ಟ್ನಲ್ಲಿ ಈ ವಿಡಿಯೋ ಮಾಡಲಾಗಿದ್ದು, ಚಿನ್ನಯ್ಯ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಮೊದಲ ಬಾರಿಗೆ ಭೇಟಿ ನೀಡಿದ್ದ ವೇಳೆ ಈ ವಿಡಿಯೋ ರೆಕಾರ್ಡ್ ಮಾಡಲಾಗಿದೆ ಎನ್ನಲಾಗಿದೆ.
ವಿಡಿಯೋದಲ್ಲಿ ಆರೋಪಿ ಚಿನ್ನಯ್ಯ ಸ್ಟಾಟ್ ನಂ.17ರ ಬಗ್ಗೆ ಮಾತನಾಡಿದ್ದಾನೆ. ಗೊಮ್ಮಟ ಬೆಟ್ಟದಿಂದ ಬರುವ ಫಸ್ಟ್ ಟರ್ನ್ನಲ್ಲಿ ಏನಿಲ್ಲ ಅಂದ್ರೂ 70ಕ್ಕೂ ಹೆಚ್ಚು ಹೆಣ ಹೂತು ಹಾಕಿದ್ದೇನೆ. ಅದು ಸ್ಮಶಾನ ಅಲ್ಲ, ಬಸ್ ಸ್ಟ್ಯಾಂಡ್ನಿಂದ ತರಕಾರಿ ತೆಗೆದುಕೊಂಡು ಹೋಗುವ ಗಾಡಿಯಲ್ಲಿ ಹೆಣ ತಂದು ಹೂತು ಹಾಕುತ್ತಿದ್ದೆ. ಯಾವ ನೆಲ ಒಣಗಿರುತ್ತೋ ಅದನ್ನು ತೆಗೆದು ಹೂತು ಹಾಕುತ್ತಿದ್ದೆ. ಇನ್ನೂ ನೇತ್ರಾವತಿ ತೀರದಲ್ಲಿ ಹೆಣ ಹೂತುಹಾಕಿದ್ದಕ್ಕೆ ಲೆಕ್ಕವೇ ಇಲ್ಲ.
ಪ್ರಾಥಮಿಕ ಶಾಲೆಯ ಹಿಂಭಾಗದ ಭಟ್ರ ಮನೆಯ ಬಾವಿಯಲ್ಲಿ ಒಂದು ಹೆಣ ಸಿಕ್ಕಿತ್ತು. ಅಲ್ಲಿ ಏನಾಯ್ತು ಅಂತಾ ಗೊತ್ತಿಲ್ಲ. ನೇತ್ರಾವತಿಯಲ್ಲಿ ಒಂದು ಹೆಣ ತೆಗೆದಿದ್ದೆ. ಅದೇ ದಿನ ಪೊಲೀಸರು ನನ್ನನ್ನು ಭಟ್ರ ಮನೆಗೆ ಕರೆದುಕೊಂಡು ಹೋದರು. ಅಲ್ಲಿ ಕೇಳಿದ್ರೆ ಹುಡುಗಿ ಫೇಲ್ ಆಗಿದ್ದಕ್ಕೆ ಬಾವಿಗೆ ಹಾರಿದ್ದಳು ಎಂದಿದ್ದರು. ನಾನು ಹೆಣ ಮೇಲೆ ಹಾಕಿ ವಾಪಸ್ ಬಂದೆ. ಜೊತೆಗೆ ಬಿಳಿ ಸೀರೆಯ ಕೇರಳ ಮೂಲದ ಹೆಂಗಸಿನ ಹೆಣವೊಂದನ್ನು ಹೂತು ಹಾಕಿದ್ದೇನೆ ಎಂದಿದ್ದಾನೆ.
ಗೊಮ್ಮಟ ಬೆಟ್ಟದಿಂದ ಬರುವ ಫಸ್ಟ್ ಟರ್ನ್ನಲ್ಲಿ ಏನಿಲ್ಲ ಅಂದ್ರೂ 70ಕ್ಕೂ ಹೆಚ್ಚು ಹೆಣ ಹೂತು ಹಾಕಿದ್ದೇನೆ ಎಂದಿದ್ದಾನೆ. ಆ ಟರ್ನ್ ನಲ್ಲಿ ಬಿಳಿ ಸೀರೆಯ ಕೇರಳ ಮೂಲದ ಹೆಂಗಸಿನ ಹೆಣ ಹೂತು ಹಾಕಿದ್ದೇನೆ ಎಂದು ಆತ ಹೇಳಿದ್ದಾನೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…