lover escaped
ಬೆಂಗಳೂರು : ತನ್ನ ಲವರ್ ಜೊತೆ ಪರಾರಿಯಾದ ಮೂರು ಮಕ್ಕಳ ತಾಯಿ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು, ಹಾಲಿ ಗಂಡ ಕೂಡ ಆಕೆಯ ಮೊದಲನೆ ಗಂಡ ಅಲ್ಲ ಎಂದು ಹೇಳಲಾಗಿದೆ. 11 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನ ಬಿಟ್ಟು ಮೂರು ಮಕ್ಕಳ ತಾಯಿ ಪ್ರಿಯಕರನೊಂದಿಗೆ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಸಮೀಪದ ಬಸವನಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು.
11 ವರ್ಷಗಳ ಹಿಂದೆ ಪ್ರೀತಿಸಿ ಮಂಜುನಾಥ್ ಎನ್ನುವಾತನನ್ನು ಲೀಲಾವತಿ ಎನ್ನುವಾಕೆ ಮದುವೆಯಾಗಿದ್ದಳು. ಮೂರು ಮಕ್ಕಳು ಸಹ ಇದ್ದವು. ಇತ್ತೀಚೆಗೆ ಮಹಿಳೆ ಲೀಲಾವತಿ ತನ್ನ ಮತ್ತೋರ್ವ ಲವರ್ ಸಂತೋಷ್ ಎಂಬಾತನ ಜೊತೆ ಓಡಿ ಹೋಗಿದ್ದಾಳೆ ಎಂದು ಪತಿ ಮಂಜುನಾಥ್ ಆರೋಪಿಸಿದ್ದರು. ಈ ಕುರಿತ ವಿಡಿಯೋ ವ್ಯಾಪಕ ವೈರಲ್ ಆಗಿತ್ತು. ಇದೀಗ ಈ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ದೊರೆತಿದ್ದು ಹಾಲಿ ಪತಿ ಎಂದು ಹೇಳಲಾಗುತ್ತಿರುವ ಮಂಜುನಾಥ್ ಕೂಡ ಲೀಲಾವತಿಯ ಮೊದಲ ಗಂಡ ಅಲ್ಲವಂತೆ. ಆತ 2ನೇ ಪತಿಯಾಗಿದ್ದು 11 ವರ್ಷಗಳ ಹಿಂದೆ ಮಂಜುನಾಥ್ ಜೊತೆ ಓಡಿ ಬಂದು ಲೀಲಾವತಿ ವಿವಾಹವಾಗಿದ್ದರು ಎಂದು ಮಂಜುನಾಥ್ ಹೇಳಿಕೊಂಡಿದ್ದಾರೆ.
ಲೀಲಾವತಿಗೆ ಈಗ ಇರುವ ಗಂಡನಿಗಿಂತಲೂ ಮೊದಲೇ ಮತ್ತೊಬ್ಬನೊಂದಿಗೆ ಮದುವೆಯಾಗಿತ್ತು ಎಂದು ಗಂಡ ಆರೋಪಿಸಿದ್ದಾನೆ. ಈಗ ನನ್ನನ್ನು ಬಿಟ್ಟು ಮತ್ತೊಬ್ಬನ ಹಿಂದೆ ಹೋಗಿದ್ದಾಳೆ ಎಂದು ಮಂಜುನಾಥ್ ಗೋಳಾಡಿದ್ದಾನೆ.
ನನ್ನನ್ನು ಮದುವೆಯಾಗುವುದಕ್ಕೂ ಮೊದಲೇ ಮತ್ತೊಬ್ಬನನ್ನು ಮದುವೆಯಾಗಿದ್ದಳು ಎಂದು ಗಂಡ ಆರೋಪಿಸಿದ್ದಾನೆ. ಅಲ್ಲದೇ 2 ವರ್ಷಗಳಿಂದ ಸತೋಷ್ ಜೊತೆ ಲವ್ವಿ ಡವ್ವಿ ಶುರು ಮಾಡಿಕೊಂಡಿದ್ದ ಆಂಟಿ ಲೀಲಾವತಿ ಇನ್ನೊಬ್ಬಾತನೊಂದಿಗೂ ಸಂಪರ್ಕದಲ್ಲಿದ್ದಳು ಎಂದು ಮಂಜುನಾಥ್ ಆರೋಪಿಸಿದ್ದರು.
ಸಾಕಷ್ಟು ಬಾರಿ ಬುದ್ದಿ ಹೇಳಿದರೂ ಬುದ್ಧಿ ಕಲಿಯದ ಲೀಲಾವತಿ ಭಾನುವಾರ ಮನೆಯಿಂದ ಪರಾರಿ ಆಗಿದ್ದಾಳೆ. ಈ ಕುರಿತು ಪತಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ. ಬಳಿಕ ಠಾಣೆಗೆ ಹಾಜರಾದ ಲೀಲಾವತಿ ತನಗೆ ಪ್ರಿಯಕರನೇ ಬೇಕೆಂದು ತಾಳಿ ಕಿತ್ತು ಗಂಡನ ಕೈಗೆ ಕೊಟ್ಟು ಹೋಗಿದ್ದಾಳೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…