ರಾಜ್ಯ

ಲವರ್‌ ಜೊತೆ 3 ಮಕ್ಕಳ ತಾಯಿ ಪರಾರಿ ಪ್ರಕರಣಕ್ಕೆ ಟ್ವಿಸ್ಟ್..!

ಬೆಂಗಳೂರು : ತನ್ನ ಲವರ್ ಜೊತೆ ಪರಾರಿಯಾದ ಮೂರು ಮಕ್ಕಳ ತಾಯಿ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು, ಹಾಲಿ ಗಂಡ ಕೂಡ ಆಕೆಯ ಮೊದಲನೆ ಗಂಡ ಅಲ್ಲ ಎಂದು ಹೇಳಲಾಗಿದೆ. 11 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನ ಬಿಟ್ಟು ಮೂರು ಮಕ್ಕಳ ತಾಯಿ ಪ್ರಿಯಕರನೊಂದಿಗೆ ಎಸ್ಕೇಪ್‌ ಆಗಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಸಮೀಪದ ಬಸವನಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು.

11 ವರ್ಷಗಳ ಹಿಂದೆ ಪ್ರೀತಿಸಿ ಮಂಜುನಾಥ್​ ಎನ್ನುವಾತನನ್ನು ಲೀಲಾವತಿ ಎನ್ನುವಾಕೆ ಮದುವೆಯಾಗಿದ್ದಳು. ಮೂರು ಮಕ್ಕಳು ಸಹ ಇದ್ದವು. ಇತ್ತೀಚೆಗೆ ಮಹಿಳೆ ಲೀಲಾವತಿ ತನ್ನ ಮತ್ತೋರ್ವ ಲವರ್ ಸಂತೋಷ್ ಎಂಬಾತನ ಜೊತೆ ಓಡಿ ಹೋಗಿದ್ದಾಳೆ ಎಂದು ಪತಿ ಮಂಜುನಾಥ್ ಆರೋಪಿಸಿದ್ದರು. ಈ ಕುರಿತ ವಿಡಿಯೋ ವ್ಯಾಪಕ ವೈರಲ್ ಆಗಿತ್ತು. ಇದೀಗ ಈ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ದೊರೆತಿದ್ದು ಹಾಲಿ ಪತಿ ಎಂದು ಹೇಳಲಾಗುತ್ತಿರುವ ಮಂಜುನಾಥ್ ಕೂಡ ಲೀಲಾವತಿಯ ಮೊದಲ ಗಂಡ ಅಲ್ಲವಂತೆ. ಆತ 2ನೇ ಪತಿಯಾಗಿದ್ದು 11 ವರ್ಷಗಳ ಹಿಂದೆ ಮಂಜುನಾಥ್ ಜೊತೆ ಓಡಿ ಬಂದು ಲೀಲಾವತಿ ವಿವಾಹವಾಗಿದ್ದರು ಎಂದು ಮಂಜುನಾಥ್ ಹೇಳಿಕೊಂಡಿದ್ದಾರೆ.

ಲೀಲಾವತಿಗೆ ಈಗ ಇರುವ ಗಂಡನಿಗಿಂತಲೂ ಮೊದಲೇ ಮತ್ತೊಬ್ಬನೊಂದಿಗೆ ಮದುವೆಯಾಗಿತ್ತು ಎಂದು ಗಂಡ ಆರೋಪಿಸಿದ್ದಾನೆ. ಈಗ ನನ್ನನ್ನು ಬಿಟ್ಟು ಮತ್ತೊಬ್ಬನ ಹಿಂದೆ ಹೋಗಿದ್ದಾಳೆ ಎಂದು ಮಂಜುನಾಥ್ ಗೋಳಾಡಿದ್ದಾನೆ.

ನನ್ನನ್ನು ಮದುವೆಯಾಗುವುದಕ್ಕೂ ಮೊದಲೇ ಮತ್ತೊಬ್ಬನನ್ನು ಮದುವೆಯಾಗಿದ್ದಳು ಎಂದು ಗಂಡ ಆರೋಪಿಸಿದ್ದಾನೆ. ಅಲ್ಲದೇ 2 ವರ್ಷಗಳಿಂದ ಸತೋಷ್‌ ಜೊತೆ ಲವ್ವಿ ಡವ್ವಿ ಶುರು ಮಾಡಿಕೊಂಡಿದ್ದ ಆಂಟಿ ಲೀಲಾವತಿ ಇನ್ನೊಬ್ಬಾತನೊಂದಿಗೂ ಸಂಪರ್ಕದಲ್ಲಿದ್ದಳು ಎಂದು ಮಂಜುನಾಥ್ ಆರೋಪಿಸಿದ್ದರು.

ಸಾಕಷ್ಟು ಬಾರಿ ಬುದ್ದಿ ಹೇಳಿದರೂ ಬುದ್ಧಿ ಕಲಿಯದ ಲೀಲಾವತಿ ಭಾನುವಾರ ಮನೆಯಿಂದ ಪರಾರಿ ಆಗಿದ್ದಾಳೆ. ಈ ಕುರಿತು ಪತಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ. ಬಳಿಕ ಠಾಣೆಗೆ ಹಾಜರಾದ ಲೀಲಾವತಿ ತನಗೆ ಪ್ರಿಯಕರನೇ ಬೇಕೆಂದು ತಾಳಿ ಕಿತ್ತು ಗಂಡನ ಕೈಗೆ ಕೊಟ್ಟು ಹೋಗಿದ್ದಾಳೆ.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

4 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

6 hours ago