lover escaped
ಬೆಂಗಳೂರು : ತನ್ನ ಲವರ್ ಜೊತೆ ಪರಾರಿಯಾದ ಮೂರು ಮಕ್ಕಳ ತಾಯಿ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು, ಹಾಲಿ ಗಂಡ ಕೂಡ ಆಕೆಯ ಮೊದಲನೆ ಗಂಡ ಅಲ್ಲ ಎಂದು ಹೇಳಲಾಗಿದೆ. 11 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನ ಬಿಟ್ಟು ಮೂರು ಮಕ್ಕಳ ತಾಯಿ ಪ್ರಿಯಕರನೊಂದಿಗೆ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಸಮೀಪದ ಬಸವನಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು.
11 ವರ್ಷಗಳ ಹಿಂದೆ ಪ್ರೀತಿಸಿ ಮಂಜುನಾಥ್ ಎನ್ನುವಾತನನ್ನು ಲೀಲಾವತಿ ಎನ್ನುವಾಕೆ ಮದುವೆಯಾಗಿದ್ದಳು. ಮೂರು ಮಕ್ಕಳು ಸಹ ಇದ್ದವು. ಇತ್ತೀಚೆಗೆ ಮಹಿಳೆ ಲೀಲಾವತಿ ತನ್ನ ಮತ್ತೋರ್ವ ಲವರ್ ಸಂತೋಷ್ ಎಂಬಾತನ ಜೊತೆ ಓಡಿ ಹೋಗಿದ್ದಾಳೆ ಎಂದು ಪತಿ ಮಂಜುನಾಥ್ ಆರೋಪಿಸಿದ್ದರು. ಈ ಕುರಿತ ವಿಡಿಯೋ ವ್ಯಾಪಕ ವೈರಲ್ ಆಗಿತ್ತು. ಇದೀಗ ಈ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ದೊರೆತಿದ್ದು ಹಾಲಿ ಪತಿ ಎಂದು ಹೇಳಲಾಗುತ್ತಿರುವ ಮಂಜುನಾಥ್ ಕೂಡ ಲೀಲಾವತಿಯ ಮೊದಲ ಗಂಡ ಅಲ್ಲವಂತೆ. ಆತ 2ನೇ ಪತಿಯಾಗಿದ್ದು 11 ವರ್ಷಗಳ ಹಿಂದೆ ಮಂಜುನಾಥ್ ಜೊತೆ ಓಡಿ ಬಂದು ಲೀಲಾವತಿ ವಿವಾಹವಾಗಿದ್ದರು ಎಂದು ಮಂಜುನಾಥ್ ಹೇಳಿಕೊಂಡಿದ್ದಾರೆ.
ಲೀಲಾವತಿಗೆ ಈಗ ಇರುವ ಗಂಡನಿಗಿಂತಲೂ ಮೊದಲೇ ಮತ್ತೊಬ್ಬನೊಂದಿಗೆ ಮದುವೆಯಾಗಿತ್ತು ಎಂದು ಗಂಡ ಆರೋಪಿಸಿದ್ದಾನೆ. ಈಗ ನನ್ನನ್ನು ಬಿಟ್ಟು ಮತ್ತೊಬ್ಬನ ಹಿಂದೆ ಹೋಗಿದ್ದಾಳೆ ಎಂದು ಮಂಜುನಾಥ್ ಗೋಳಾಡಿದ್ದಾನೆ.
ನನ್ನನ್ನು ಮದುವೆಯಾಗುವುದಕ್ಕೂ ಮೊದಲೇ ಮತ್ತೊಬ್ಬನನ್ನು ಮದುವೆಯಾಗಿದ್ದಳು ಎಂದು ಗಂಡ ಆರೋಪಿಸಿದ್ದಾನೆ. ಅಲ್ಲದೇ 2 ವರ್ಷಗಳಿಂದ ಸತೋಷ್ ಜೊತೆ ಲವ್ವಿ ಡವ್ವಿ ಶುರು ಮಾಡಿಕೊಂಡಿದ್ದ ಆಂಟಿ ಲೀಲಾವತಿ ಇನ್ನೊಬ್ಬಾತನೊಂದಿಗೂ ಸಂಪರ್ಕದಲ್ಲಿದ್ದಳು ಎಂದು ಮಂಜುನಾಥ್ ಆರೋಪಿಸಿದ್ದರು.
ಸಾಕಷ್ಟು ಬಾರಿ ಬುದ್ದಿ ಹೇಳಿದರೂ ಬುದ್ಧಿ ಕಲಿಯದ ಲೀಲಾವತಿ ಭಾನುವಾರ ಮನೆಯಿಂದ ಪರಾರಿ ಆಗಿದ್ದಾಳೆ. ಈ ಕುರಿತು ಪತಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ. ಬಳಿಕ ಠಾಣೆಗೆ ಹಾಜರಾದ ಲೀಲಾವತಿ ತನಗೆ ಪ್ರಿಯಕರನೇ ಬೇಕೆಂದು ತಾಳಿ ಕಿತ್ತು ಗಂಡನ ಕೈಗೆ ಕೊಟ್ಟು ಹೋಗಿದ್ದಾಳೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…