dharmasthala
ಧರ್ಮಸ್ಥಳ: ನೂರಾರು ಶವ ಹೂತಿದ್ದೇನೆ ಎಂದು ಆರೋಪಿಸಿದ್ದ ಅನಾಮಿಕ ದೂರುದಾರ ಮತ್ತಷ್ಟು ಕಡೆ ಅಗೆತಕ್ಕೆ ಒತ್ತಾಯಿಸುತ್ತಿದ್ದಾನೆ ಎನ್ನಲಾಗಿದೆ.
ಧರ್ಮಸ್ಥಳದಲ್ಲಿ 30 ಕಡೆ 300 ಹೆಣ ಹೂತಿದ್ದೇನೆ. ಅಲ್ಲೂ ಶೋಧ ನಡೆಸಿ ಎಂದು ಅನಾಮಿಕ ದೂರುದಾರ ಎಸ್ಐಟಿಗೆ ಹೇಳಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಅನಾಮಿಕ ಸಾಕ್ಷಿದಾರನ ದೂರಿನ ಮೇಲೆ ಧರ್ಮಸ್ಥಳ ಗ್ರಾಮದಲ್ಲಿ 13ನೇ ಪಾಯಿಂಟ್ನಲ್ಲಿ ನಿನ್ನೆ ಉತ್ಖನನ ನಡೆಸಲಾಯಿತು. ಇದೇ ಮೊದಲ ಬಾರಿಗೆ ಕಾರ್ಯಾಚರಣೆ ವೇಳೆ ಡ್ರೋನ್-ಮೌಂಟೆಡ್ ಜಿಪಿಆರ್ ತಂತ್ರಜ್ಞಾನ ಬಳಸಿ ಶೋಧ ಕಾರ್ಯ ನಡೆಸಲಾಯಿತು. ಉಳಿದ ಕಡೆಯಂತೆ ಇಲ್ಲಿಯೂ ಸಾಕ್ಷಿದಾರನ ಮುಂದೆಯೇ 20 ಅಡಿಗಳವರೆಗೆ ಅಗೆಯಿತಾದರೂ ಯಾವುದೇ ಕುರುಹು ಪತ್ತೆಯಾಗಿಲ್ಲ.
ಈ ಹಿನ್ನೆಲೆಯಲ್ಲಿ ಇಂದು ಕೂಡ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಅನಾಮಿಕ ದೂರುದಾರನಿಗೆ ಮಂಪರು ಪರೀಕ್ಷೆ ನಡೆಸುವ ಸಾಧ್ಯತೆಯಿದೆ.
ಇನ್ನು ಈ ಮೊದಲು ಸಿಕ್ಕಿರುವ ಮೂಳೆಗಳ ಡಿಎನ್ಎ ನಾಶವಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಎಸ್ಐಟಿ ಕೋರ್ಟ್ಗೆ ಅರ್ಜಿ ಸಲ್ಲಿಸಲು ಮುಂದಾಗಿದೆ ಎನ್ನಲಾಗಿದೆ.
ಹೊಸದಿಲ್ಲಿ : ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್…
ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್ಸಿಬಿ ಮೊದಲ ಪಂದ್ಯವನ್ನು ಸನ್ರೈಸರ್ಸ್…
ಟೆಹ್ರಾನ್ : ಇಷ್ಟು ದಿನ ತನ್ನ ನೆರೆಹೊರೆಯ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದ ಇರಾನ್ ಇದೀಗ…
ಬೆಂಗಳೂರು : ಭರ್ಜರಿ ಪ್ರದರ್ಶನ ಕಾಣುತ್ತಿರು ಧುರಂಧರ್ 2 ಸಿನಿಮಾ ನಿರಾಸೆ ಮೂಡಿಸಿದ್ದು, ಚಿತ್ರಮಂದಿರಕ್ಕೆ ಹೋಗಿ ನಿಮ್ಮ ಸಮಯ ಮತ್ತು…
ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ…
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…