dharmasthala
ಧರ್ಮಸ್ಥಳ: ನೂರಾರು ಶವ ಹೂತಿದ್ದೇನೆ ಎಂದು ಆರೋಪಿಸಿದ್ದ ಅನಾಮಿಕ ದೂರುದಾರ ಮತ್ತಷ್ಟು ಕಡೆ ಅಗೆತಕ್ಕೆ ಒತ್ತಾಯಿಸುತ್ತಿದ್ದಾನೆ ಎನ್ನಲಾಗಿದೆ.
ಧರ್ಮಸ್ಥಳದಲ್ಲಿ 30 ಕಡೆ 300 ಹೆಣ ಹೂತಿದ್ದೇನೆ. ಅಲ್ಲೂ ಶೋಧ ನಡೆಸಿ ಎಂದು ಅನಾಮಿಕ ದೂರುದಾರ ಎಸ್ಐಟಿಗೆ ಹೇಳಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಅನಾಮಿಕ ಸಾಕ್ಷಿದಾರನ ದೂರಿನ ಮೇಲೆ ಧರ್ಮಸ್ಥಳ ಗ್ರಾಮದಲ್ಲಿ 13ನೇ ಪಾಯಿಂಟ್ನಲ್ಲಿ ನಿನ್ನೆ ಉತ್ಖನನ ನಡೆಸಲಾಯಿತು. ಇದೇ ಮೊದಲ ಬಾರಿಗೆ ಕಾರ್ಯಾಚರಣೆ ವೇಳೆ ಡ್ರೋನ್-ಮೌಂಟೆಡ್ ಜಿಪಿಆರ್ ತಂತ್ರಜ್ಞಾನ ಬಳಸಿ ಶೋಧ ಕಾರ್ಯ ನಡೆಸಲಾಯಿತು. ಉಳಿದ ಕಡೆಯಂತೆ ಇಲ್ಲಿಯೂ ಸಾಕ್ಷಿದಾರನ ಮುಂದೆಯೇ 20 ಅಡಿಗಳವರೆಗೆ ಅಗೆಯಿತಾದರೂ ಯಾವುದೇ ಕುರುಹು ಪತ್ತೆಯಾಗಿಲ್ಲ.
ಈ ಹಿನ್ನೆಲೆಯಲ್ಲಿ ಇಂದು ಕೂಡ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಅನಾಮಿಕ ದೂರುದಾರನಿಗೆ ಮಂಪರು ಪರೀಕ್ಷೆ ನಡೆಸುವ ಸಾಧ್ಯತೆಯಿದೆ.
ಇನ್ನು ಈ ಮೊದಲು ಸಿಕ್ಕಿರುವ ಮೂಳೆಗಳ ಡಿಎನ್ಎ ನಾಶವಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಎಸ್ಐಟಿ ಕೋರ್ಟ್ಗೆ ಅರ್ಜಿ ಸಲ್ಲಿಸಲು ಮುಂದಾಗಿದೆ ಎನ್ನಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…