dharmasthala
ಧರ್ಮಸ್ಥಳ: ನೂರಾರು ಶವ ಹೂತಿದ್ದೇನೆ ಎಂದು ಆರೋಪಿಸಿದ್ದ ಅನಾಮಿಕ ದೂರುದಾರ ಮತ್ತಷ್ಟು ಕಡೆ ಅಗೆತಕ್ಕೆ ಒತ್ತಾಯಿಸುತ್ತಿದ್ದಾನೆ ಎನ್ನಲಾಗಿದೆ.
ಧರ್ಮಸ್ಥಳದಲ್ಲಿ 30 ಕಡೆ 300 ಹೆಣ ಹೂತಿದ್ದೇನೆ. ಅಲ್ಲೂ ಶೋಧ ನಡೆಸಿ ಎಂದು ಅನಾಮಿಕ ದೂರುದಾರ ಎಸ್ಐಟಿಗೆ ಹೇಳಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಅನಾಮಿಕ ಸಾಕ್ಷಿದಾರನ ದೂರಿನ ಮೇಲೆ ಧರ್ಮಸ್ಥಳ ಗ್ರಾಮದಲ್ಲಿ 13ನೇ ಪಾಯಿಂಟ್ನಲ್ಲಿ ನಿನ್ನೆ ಉತ್ಖನನ ನಡೆಸಲಾಯಿತು. ಇದೇ ಮೊದಲ ಬಾರಿಗೆ ಕಾರ್ಯಾಚರಣೆ ವೇಳೆ ಡ್ರೋನ್-ಮೌಂಟೆಡ್ ಜಿಪಿಆರ್ ತಂತ್ರಜ್ಞಾನ ಬಳಸಿ ಶೋಧ ಕಾರ್ಯ ನಡೆಸಲಾಯಿತು. ಉಳಿದ ಕಡೆಯಂತೆ ಇಲ್ಲಿಯೂ ಸಾಕ್ಷಿದಾರನ ಮುಂದೆಯೇ 20 ಅಡಿಗಳವರೆಗೆ ಅಗೆಯಿತಾದರೂ ಯಾವುದೇ ಕುರುಹು ಪತ್ತೆಯಾಗಿಲ್ಲ.
ಈ ಹಿನ್ನೆಲೆಯಲ್ಲಿ ಇಂದು ಕೂಡ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಅನಾಮಿಕ ದೂರುದಾರನಿಗೆ ಮಂಪರು ಪರೀಕ್ಷೆ ನಡೆಸುವ ಸಾಧ್ಯತೆಯಿದೆ.
ಇನ್ನು ಈ ಮೊದಲು ಸಿಕ್ಕಿರುವ ಮೂಳೆಗಳ ಡಿಎನ್ಎ ನಾಶವಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಎಸ್ಐಟಿ ಕೋರ್ಟ್ಗೆ ಅರ್ಜಿ ಸಲ್ಲಿಸಲು ಮುಂದಾಗಿದೆ ಎನ್ನಲಾಗಿದೆ.
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…