ರಾಜ್ಯ

ಬೆಂಗಳೂರಿನಲ್ಲಿ ಭೀಕರ ಅಪಘಾತ: ಶಾಲಾ ಬಸ್‌ ಹರಿದು ಇಬ್ಬರು ಪುಟ್ಟ ಮಕ್ಕಳ ದಾರುಣ ಸಾವು

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹೆಣ್ಣೂರು ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯ ಥಣಿಸಂದ್ರದ ಪೊಲೀಸ್‌ ಕ್ವಾಟ್ರಸ್‌ ಬಳಿಯೇ ಈ ಅವಘಡ ಸಂಭವಿಸಿದೆ.

ಮೃತ ಮಕ್ಕಳನ್ನು ವರ್ಷಾ(2), ಭಾನು(4) ಎಂದು ಗುರುತಿಸಲಾಗಿದೆ.

ಕಾನ್ಸ್‌ಟೇಬಲ್‌ ನಾಗನಗೌಡ ಅವರು ಮಕ್ಕಳನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದಾಗ ಶಾಲಾ ಬಸ್ಸೊಂದು ಯುಟರ್ನ್‌ ತೆಗೆದುಕೊಳ್ಳುವಾಗ ಅಜಾಗರೂಕತೆಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಮಕ್ಕಳಿಬರಬು ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ಮಕ್ಕಳ ಮೇಲೆ ಹರಿದಿದೆ. ತೀವ್ರವಾಗಿ ಗಾಯಗೊಂಡ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಹೆಣ್ಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

50 mins ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

58 mins ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

1 hour ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

1 hour ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

1 hour ago