ರಾಜ್ಯ

ಭಾರತೀಯ ಚುನಾವಣಾ ಆಯೋಗದಿಂದ ಎರಡು ದಿನಗಳ ಸಮ್ಮೇಳನ

ಬೆಂಗಳೂರು: ಭಾರತೀಯ ಚುನಾವಣಾ ಆಯೋಗದಿಂದ ಎರಡು ದಿನಗಳ ಕಾಲ (ಮಾ.4 ಮತ್ತು 5) ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ.

ಭಾರತ ಮುಖ್ಯ ಚುನಾವಣಾಧಿಕಾರಿಗಳಾಗಿ ನೇಮಕವಾಗಿರುವ ಜ್ಞಾನೇಶ್ ಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಹಮ್ಮಿಕೊಳ್ಳಲಾಗಿರುವ ಮೊದಲ ಸಮ್ಮೇಳನ ಇದಾಗಿದೆ.

ಮೊದಲನೆಯದಾಗಿ ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಸಮ್ಮೇಳನದಲ್ಲಿ ಭಾಗವಹಿಸುವಂತೆ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು (ಡಿ.ಇ.ಓ) ಮತ್ತು ಚುನಾವಣಾ ನೋಂದಣ ಅಧಿಕಾರಿಗಳನ್ನು (ಇ.ಆರ್.ಓ) ನಾಮನಿರ್ದೇಶನ ಮಾಡಲು ಸೂಚನೆ ನೀಡಲಾಗಿದೆ.

ಶಾಸನಬದ್ಧ ಅಧಿಕಾರಿಗಳಾಗಿ, ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಮುಖ್ಯ ಚುನಾವಣಾಧಿಕಾರಿಗಳು, ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಚುನಾವಣಾ ನೋಂದಣಾ ಅಧಿಕಾರಿಗಳು (ಇ.ಆರ್.ಓ) ರಾಜ್ಯ, ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರದ ಮಟ್ಟದಲ್ಲಿ ಪ್ರಮುಖ ಕಾರ್ಯಗಳನ್ನು ನಿರ್ವಹಿಸಲು ಈ ಸಮ್ಮೇಳನವು ಅಗತ್ಯ ಮಾಹಿತಿಯನ್ನು ಒದಗಿಸಲಿದೆ.

ಸಮ್ಮೇಳನದ ಮೊದಲನ ದಿನ ಆಧುನಿಕ ಚುನಾವಣಾ ನಿರ್ವಹಣೆಯ ಪ್ರಮುಖ ಕ್ಷೇತ್ರಗಳ ಬಗ್ಗೆ ಮಾಹಿತಿ ತಂತ್ರಜ್ಞಾನ, ಪರಿಣಾಮಕಾರಿ ಸಂವಹನ, ಸಾಮಾಜಿಕ ಮಾಧ್ಯಮವನ್ನು ಹೆಚ್ಚಿಸುವುದು ಮತ್ತು ಚುನಾವಣಾ ಪ್ರಕ್ರಿಯೆಗಳಲ್ಲಿ ವಿಭಿನ್ನ ಕಾರ್ಯಕರ್ತರ ಶಾಸನಬದ್ಧ ಪಾತ್ರದ ಕುರಿತು ಚರ್ಚೆಗಳನ್ನು ನಡೆಸಲಿದೆ.

ಎರಡನೇ ದಿನ, ರಾಜ್ಯಗಳು ಮತ್ತು ಕೇಂದ್ರಾಡಳಿತದ ಮುಖ್ಯ ಚುನಾವಣಾಧಿಕಾರಿಗಳು ಹಿಂದಿನ ದಿನದ ವಿಷಯಾಧಾರಿತ ಚರ್ಚೆಗಳ ಕುರಿತು ಆಯಾ ಕ್ರಿಯಾ ಯೋಜನೆಯನ್ನು ಪ್ರಸ್ತುತಪಡಿಸುತ್ತಾರೆ ಎಂದು ಭಾರತ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಿದೆ.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇಸ್ಕಾನ್ ಕೃಷ್ಣ ದೇವಾಲಯದ ಬಳಿಯಿದ್ದ ಕಸ ತೆರವು

ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…

2 hours ago

ಓದುಗರ ಪತ್ರ: ಪ್ರಮುಖ ವೃತ್ತಗಳಲ್ಲಿ ಭಿಕ್ಷುಕರ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…

2 hours ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ, ಯುಜಿಡಿ ಪೈಪ್ ಬದಲಿಸಿ

ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು…

2 hours ago

ಓದುಗರ ಪತ್ರ: ಹೊಸ ವರ್ಷದ ಸಂಕಲ್ಪ

ಹೊಸ ವರ್ಷದ ಆಗಮನವೆಂದರೆ ಬಣ್ಣಬಣ್ಣದ ದೀಪಗಳ ಅಲಂಕಾರ, ಸಿಹಿ ವಿತರಣೆ ಅಥವಾ ಮಧ್ಯರಾತ್ರಿಯ ಸಂಭ್ರಮಾಚರಣೆಯಷ್ಟೇ ಅಲ್ಲ. ಅದು ಕಾಲ ಚಕ್ರದ…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎಚ್‌ಐವಿ ಮಕ್ಕಳಿಗಾಗಿ ಉದ್ಯೋಗ ಬಿಟ್ಟ ದತ್ತಾ-ಸಂಧ್ಯಾ ದಂಪತಿ

ಪಂಜುಗಂಗೊಳ್ಳಿ  ಸಮಾಜದಿಂದ ಪರಿತ್ಯಕ್ತರಾದ ಮಕ್ಕಳ ಬಾಳಲ್ಲಿ ಬೆಳಕು ಮೂಡಿಸಿದ ಆನಂದ ಗ್ರಾಮ ಮಹಾರಾಷ್ಟ್ರದ ಬೀಡ್‌ನ ಜಿಲ್ಲಾ ಆಸ್ಪತ್ರೆಯ ರಕ್ತದ ಬ್ಯಾಂಕಿನಲ್ಲಿ…

2 hours ago

ಕೊಡಗು ಜಿಲ್ಲೆಯತ್ತ ಪ್ರವಾಸಿಗರ ದಂಡು..!

ಪುನೀತ್ ಮಡಿಕೇರಿ ಹೊಸ ವರ್ಷಾಚರಣೆಗೆ ಕೊಡಗಿನತ್ತ ಮುಖ ಮಾಡಿದ ಜನರು; ಜಿಲ್ಲೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಮಡಿಕೇರಿ: ಹೊಸ ವರ್ಷವನ್ನು…

2 hours ago