ರಾಜ್ಯ

ಭಾರತೀಯ ಚುನಾವಣಾ ಆಯೋಗದಿಂದ ಎರಡು ದಿನಗಳ ಸಮ್ಮೇಳನ

ಬೆಂಗಳೂರು: ಭಾರತೀಯ ಚುನಾವಣಾ ಆಯೋಗದಿಂದ ಎರಡು ದಿನಗಳ ಕಾಲ (ಮಾ.4 ಮತ್ತು 5) ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ.

ಭಾರತ ಮುಖ್ಯ ಚುನಾವಣಾಧಿಕಾರಿಗಳಾಗಿ ನೇಮಕವಾಗಿರುವ ಜ್ಞಾನೇಶ್ ಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಹಮ್ಮಿಕೊಳ್ಳಲಾಗಿರುವ ಮೊದಲ ಸಮ್ಮೇಳನ ಇದಾಗಿದೆ.

ಮೊದಲನೆಯದಾಗಿ ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಸಮ್ಮೇಳನದಲ್ಲಿ ಭಾಗವಹಿಸುವಂತೆ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು (ಡಿ.ಇ.ಓ) ಮತ್ತು ಚುನಾವಣಾ ನೋಂದಣ ಅಧಿಕಾರಿಗಳನ್ನು (ಇ.ಆರ್.ಓ) ನಾಮನಿರ್ದೇಶನ ಮಾಡಲು ಸೂಚನೆ ನೀಡಲಾಗಿದೆ.

ಶಾಸನಬದ್ಧ ಅಧಿಕಾರಿಗಳಾಗಿ, ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಮುಖ್ಯ ಚುನಾವಣಾಧಿಕಾರಿಗಳು, ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಚುನಾವಣಾ ನೋಂದಣಾ ಅಧಿಕಾರಿಗಳು (ಇ.ಆರ್.ಓ) ರಾಜ್ಯ, ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರದ ಮಟ್ಟದಲ್ಲಿ ಪ್ರಮುಖ ಕಾರ್ಯಗಳನ್ನು ನಿರ್ವಹಿಸಲು ಈ ಸಮ್ಮೇಳನವು ಅಗತ್ಯ ಮಾಹಿತಿಯನ್ನು ಒದಗಿಸಲಿದೆ.

ಸಮ್ಮೇಳನದ ಮೊದಲನ ದಿನ ಆಧುನಿಕ ಚುನಾವಣಾ ನಿರ್ವಹಣೆಯ ಪ್ರಮುಖ ಕ್ಷೇತ್ರಗಳ ಬಗ್ಗೆ ಮಾಹಿತಿ ತಂತ್ರಜ್ಞಾನ, ಪರಿಣಾಮಕಾರಿ ಸಂವಹನ, ಸಾಮಾಜಿಕ ಮಾಧ್ಯಮವನ್ನು ಹೆಚ್ಚಿಸುವುದು ಮತ್ತು ಚುನಾವಣಾ ಪ್ರಕ್ರಿಯೆಗಳಲ್ಲಿ ವಿಭಿನ್ನ ಕಾರ್ಯಕರ್ತರ ಶಾಸನಬದ್ಧ ಪಾತ್ರದ ಕುರಿತು ಚರ್ಚೆಗಳನ್ನು ನಡೆಸಲಿದೆ.

ಎರಡನೇ ದಿನ, ರಾಜ್ಯಗಳು ಮತ್ತು ಕೇಂದ್ರಾಡಳಿತದ ಮುಖ್ಯ ಚುನಾವಣಾಧಿಕಾರಿಗಳು ಹಿಂದಿನ ದಿನದ ವಿಷಯಾಧಾರಿತ ಚರ್ಚೆಗಳ ಕುರಿತು ಆಯಾ ಕ್ರಿಯಾ ಯೋಜನೆಯನ್ನು ಪ್ರಸ್ತುತಪಡಿಸುತ್ತಾರೆ ಎಂದು ಭಾರತ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಿದೆ.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

3 hours ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸರ್ಕಾರ ಗುಣಮಟ್ಟದ ಚಲನಚಿತ್ರಗಳಿಗೆ ನೀಡುವ ಸಹಾಯಧನದ ಆಚೆ ಈಚೆ

ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…

3 hours ago

ಅಮೃತ್ ೨.೦ ಯೋಜನೆ ಕಾಮಗಾರಿ ಚುರುಕು

ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್‌ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…

4 hours ago

ಸಫಾರಿಗೆ ರಹದಾರಿ; ವಾದ-ಪ್ರತಿರೋಧ

ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…

4 hours ago

ದಮ್ಮನಕಟ್ಟೆ ಸಫಾರಿ ಸವಿಯಲು ಪ್ರವಾಸಿಗರು ಕಾತರ…

ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…

4 hours ago