ಬೆಂಗಳೂರು: ಭಾರತೀಯ ಚುನಾವಣಾ ಆಯೋಗದಿಂದ ಎರಡು ದಿನಗಳ ಕಾಲ (ಮಾ.4 ಮತ್ತು 5) ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ.
ಭಾರತ ಮುಖ್ಯ ಚುನಾವಣಾಧಿಕಾರಿಗಳಾಗಿ ನೇಮಕವಾಗಿರುವ ಜ್ಞಾನೇಶ್ ಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಹಮ್ಮಿಕೊಳ್ಳಲಾಗಿರುವ ಮೊದಲ ಸಮ್ಮೇಳನ ಇದಾಗಿದೆ.
ಮೊದಲನೆಯದಾಗಿ ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಸಮ್ಮೇಳನದಲ್ಲಿ ಭಾಗವಹಿಸುವಂತೆ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು (ಡಿ.ಇ.ಓ) ಮತ್ತು ಚುನಾವಣಾ ನೋಂದಣ ಅಧಿಕಾರಿಗಳನ್ನು (ಇ.ಆರ್.ಓ) ನಾಮನಿರ್ದೇಶನ ಮಾಡಲು ಸೂಚನೆ ನೀಡಲಾಗಿದೆ.
ಶಾಸನಬದ್ಧ ಅಧಿಕಾರಿಗಳಾಗಿ, ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಮುಖ್ಯ ಚುನಾವಣಾಧಿಕಾರಿಗಳು, ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಚುನಾವಣಾ ನೋಂದಣಾ ಅಧಿಕಾರಿಗಳು (ಇ.ಆರ್.ಓ) ರಾಜ್ಯ, ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರದ ಮಟ್ಟದಲ್ಲಿ ಪ್ರಮುಖ ಕಾರ್ಯಗಳನ್ನು ನಿರ್ವಹಿಸಲು ಈ ಸಮ್ಮೇಳನವು ಅಗತ್ಯ ಮಾಹಿತಿಯನ್ನು ಒದಗಿಸಲಿದೆ.
ಸಮ್ಮೇಳನದ ಮೊದಲನ ದಿನ ಆಧುನಿಕ ಚುನಾವಣಾ ನಿರ್ವಹಣೆಯ ಪ್ರಮುಖ ಕ್ಷೇತ್ರಗಳ ಬಗ್ಗೆ ಮಾಹಿತಿ ತಂತ್ರಜ್ಞಾನ, ಪರಿಣಾಮಕಾರಿ ಸಂವಹನ, ಸಾಮಾಜಿಕ ಮಾಧ್ಯಮವನ್ನು ಹೆಚ್ಚಿಸುವುದು ಮತ್ತು ಚುನಾವಣಾ ಪ್ರಕ್ರಿಯೆಗಳಲ್ಲಿ ವಿಭಿನ್ನ ಕಾರ್ಯಕರ್ತರ ಶಾಸನಬದ್ಧ ಪಾತ್ರದ ಕುರಿತು ಚರ್ಚೆಗಳನ್ನು ನಡೆಸಲಿದೆ.
ಎರಡನೇ ದಿನ, ರಾಜ್ಯಗಳು ಮತ್ತು ಕೇಂದ್ರಾಡಳಿತದ ಮುಖ್ಯ ಚುನಾವಣಾಧಿಕಾರಿಗಳು ಹಿಂದಿನ ದಿನದ ವಿಷಯಾಧಾರಿತ ಚರ್ಚೆಗಳ ಕುರಿತು ಆಯಾ ಕ್ರಿಯಾ ಯೋಜನೆಯನ್ನು ಪ್ರಸ್ತುತಪಡಿಸುತ್ತಾರೆ ಎಂದು ಭಾರತ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…