ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸಾವಿನ ಪ್ರಮಾಣ ಕೂಡ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ.
ಬೆಂಗಳೂರಿನ ಜನತೆ ಡೆಂಗ್ಯೂ ಕಪಿಮುಷ್ಟಿಯಲ್ಲಿ ವಿಲವಿಲ ಒದ್ದಾಡುತ್ತಿದ್ದು, ಏರಿಯಾ ಏರಿಯಾಗಳಲ್ಲೂ ಡೆಂಗ್ಯೂ ತಾಂಡವವಾಡುತ್ತಿದೆ. ಇಂದು ಬೆಂಗಳೂರಿನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರು ಪೂರ್ವ ವಲಯದಲ್ಲಿ 80 ವರ್ಷದ ವೃದ್ಧೆ ಹಾಗೂ 27 ವರ್ಷದ ಯುವಕ ಡೆಂಗ್ಯೂಗೆ ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಳೆಗಾಲ ಆರಂಭವಾಗುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ ಓಟ ಜೋರಾಗಿದೆ. ಕಳೆದ ವರ್ಷದ ಜೂನ್ ತಿಂಗಳಿಗೆ ಹೋಲಿಸಿದರೆ ಈ ವರ್ಷ ಜೂನ್ ತಿಂಗಳಿನಲ್ಲಿ ದುಪ್ಪಟ್ಟು ಕೇಸ್ಗಳು ಬೆಂಗಳೂರಿನಲ್ಲೇ ಪತ್ತೆಯಾಗಿವೆ.
ಸಾವಿನ ಸಂಖ್ಯೆ ಕೂಡ ಹೆಚ್ಚಳವಾಗುತ್ತಿದ್ದು, ಜನತೆ ಜಾಗ್ರತೆ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಮನೆಯ ಸುತ್ತಮುತ್ತಾ ಮಳೆ ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಿ, ಮಳೆ ನೀರು ಸರಾಗವಾಹಿ ಹರಿದು ಹೋಗುವಂತೆ ವ್ಯವಸ್ಥೆ ಮಾಡಿಕೊಳ್ಳಿ, ರೋಗ ಲಕ್ಷಣಗಳು ಕಂಡು ಬಂದರೆ, ಶೀಘ್ರದಲ್ಲೇ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಿ. ಎಲ್ಲಾ ಕಡೆ ಶುಚಿತ್ವ ಕಾಪಾಡಿ ಎಂದು ಆರೋಗ್ಯ ಇಲಾಖೆ ಜನತೆಗೆ ಮನವಿ ಮಾಡಿದೆ.
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…
ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…