ಬೆಂಗಳೂರು: ಲಂಚಕ್ಕೆ ಬೇಡಿಕೆ ಹಾಗೂ ಜೀವ ಬೆದರಿಕೆ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದೆ.
ನನ್ನ ಮೇಲೆ ದೌರ್ಜನ್ಯ ನಡೆಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವವರು ಆರೋಪಿಸಿದ್ದರು. ಈ ಸಂಬಂಧ ಪೊಲೀಸ್ ಆಯುಕ್ತ ಬಿ.ದಯಾನಂದ ಅವರಿಗೆ ದೂರು ಸಲ್ಲಿಸಿದ್ದರು.
ಇದಕ್ಕೆ ಪುಷ್ಠಿ ನೀಡುವಂತೆ ಶಾಸಕ ಮುನಿರತ್ನ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾದ ಆಡಿಯೋ ಇದೀಗ ವೈರಲ್ ಆಗಿದೆ. ಬೇಡಿಕೆ ಹಣವನ್ನು ಚಲುವರಾಜು ನೀಡದ ಕಾರಣ ಶಾಸಕರು ಗುತ್ತಿಗೆ ನಿಲ್ಲಿಸಿದ್ದಾರೆ ಎನ್ನಲಾಗಿದೆ.
ಗುತ್ತಿಗೆ ಮುಂದುವರಿಸಲು ಈ ಹಿಂದೆ ನಿರ್ಧರಿಸಿದ್ದ ಹಣವನ್ನು ಪಾವತಿಸಬೇಕು ಎಂದು ಮುನಿರತ್ನ ಸಹಾಯಕ ಸಂತೋಷ್ ಹೇಳಿದ್ದಾರೆ ಅಂತಾ ಚಲುವರಾಜು ತಿಳಿಸಿದ್ದಾರೆ.
ಈ ಆಡಿಯೋ ಕ್ಲಿಪನ್ನು ನಗರ ಪೊಲೀಸ್ ಮುಖ್ಯಸ್ಥರಿಗೆ ಸಲ್ಲಿಸಿದ್ದು, ಘಟನೆಯ ಸಂಪೂರ್ಣ ವಿವರವನ್ನು ಹೇಳಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದಲ್ಲಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದೆ.
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…
ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…
ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…
ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…
ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…