ಬೆಂಗಳೂರು: ಲಂಚಕ್ಕೆ ಬೇಡಿಕೆ ಹಾಗೂ ಜೀವ ಬೆದರಿಕೆ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದೆ.
ನನ್ನ ಮೇಲೆ ದೌರ್ಜನ್ಯ ನಡೆಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವವರು ಆರೋಪಿಸಿದ್ದರು. ಈ ಸಂಬಂಧ ಪೊಲೀಸ್ ಆಯುಕ್ತ ಬಿ.ದಯಾನಂದ ಅವರಿಗೆ ದೂರು ಸಲ್ಲಿಸಿದ್ದರು.
ಇದಕ್ಕೆ ಪುಷ್ಠಿ ನೀಡುವಂತೆ ಶಾಸಕ ಮುನಿರತ್ನ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾದ ಆಡಿಯೋ ಇದೀಗ ವೈರಲ್ ಆಗಿದೆ. ಬೇಡಿಕೆ ಹಣವನ್ನು ಚಲುವರಾಜು ನೀಡದ ಕಾರಣ ಶಾಸಕರು ಗುತ್ತಿಗೆ ನಿಲ್ಲಿಸಿದ್ದಾರೆ ಎನ್ನಲಾಗಿದೆ.
ಗುತ್ತಿಗೆ ಮುಂದುವರಿಸಲು ಈ ಹಿಂದೆ ನಿರ್ಧರಿಸಿದ್ದ ಹಣವನ್ನು ಪಾವತಿಸಬೇಕು ಎಂದು ಮುನಿರತ್ನ ಸಹಾಯಕ ಸಂತೋಷ್ ಹೇಳಿದ್ದಾರೆ ಅಂತಾ ಚಲುವರಾಜು ತಿಳಿಸಿದ್ದಾರೆ.
ಈ ಆಡಿಯೋ ಕ್ಲಿಪನ್ನು ನಗರ ಪೊಲೀಸ್ ಮುಖ್ಯಸ್ಥರಿಗೆ ಸಲ್ಲಿಸಿದ್ದು, ಘಟನೆಯ ಸಂಪೂರ್ಣ ವಿವರವನ್ನು ಹೇಳಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದಲ್ಲಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದೆ.
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಬಹುತೇಕ ಪ್ರದೇಶಗಳು ಬೆಟ್ಟಗುಡ್ಡ ಹಾಗೂ ಅರಣ್ಯ ಅಂಚಿನ ಪ್ರದೇಶಗಳಿಂದ ಕೂಡಿದ್ದು, ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ…
ಹೇಮಂತ್ ಕುಮಾರ್ ಜಾತಿ, ಆದಾಯ ಪ್ರಮಾಣ ಪತ್ರಕ್ಕೂ ಅಲೆದಾಟ; ಸರತಿ ಸಾಲಿನಲ್ಲಿ ನಿಂತು ಜನರ ಗೊಣಗಾಟ ಮಂಡ್ಯ: ತಾಲ್ಲೂಕು ಕೇಂದ್ರವಾದ…
ಎಂ.ನಾರಾಯಣ ತಿ.ನರಸೀಪುರ ತಾಲ್ಲೂಕಿನಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ; ಒಣಗುತ್ತಿರುವ ಬೆಳೆ ತಿ.ನರಸೀಪುರ: ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ…
ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…
ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…