ರಾಜ್ಯ

ಒಂದೇ ದಿನ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಉತ್ತರ ಕರ್ನಾಟಕವನ್ನೇ ಬೆಚ್ಚಿಬೀಳಿಸಿದ ಪ್ರಕರಣ

ಹುಬ್ಬಳ್ಳಿ: ಕರ್ನಾಟಕದ ವಾಣಿಜ್ಯನಗರಿಯಲ್ಲಿ ಒಂದೇ ದಿನದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಪ್ರಕರಣವು ಇಡೀ ಉತ್ತರ ಕರ್ನಾಟಕವನ್ನು ಬೆಚ್ಚಿ ಬೀಳಿಸಿದೆ.

ಶಹರ ಮತ್ತು ಅಶೋಕ್‍ನಗರ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ನಡೆದಿರುವ ಈ ಎರಡು ಅತ್ಯಾಚಾರ ಪ್ರಕರಣಗಳಲ್ಲಿ ಅಪ್ರಾಪ್ತರೆ ಆರೋಪಿಗಳಾಗಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 13 ವರ್ಷದ ಬಾಲಕಿಯ ಮೇಲೆ 14-15 ವರ್ಷದ ಮೂವರು ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಪೋಷಕರು ಇಲ್ಲದಿರುವ ಸಮಯದಲ್ಲಿ, ಅದೇ ಪ್ರದೇಶದಲ್ಲಿ ವಾಸಿಸುವ ಬಾಲಕರು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ದೌರ್ಜನ್ಯಕ್ಕೆ ಒಳಗಾಗಿರುವ ಬಾಲಕಿಗೆ ರಕ್ಷಣೆ ನೀಡಲಾಗಿದೆ ಮತ್ತು ಮೂವರು ಬಾಲಕರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಲ್ಲಿ ಇಬ್ಬರು ಪ್ರೌಢಶಾಲಾ ವಿದ್ಯಾರ್ಥಿಗಳಾಗಿದ್ದು, ಮತ್ತೊಬ್ಬ ಬಾಲಕ ಶಾಲೆ ಬಿಟ್ಟವನಂತೆ ಕಾಣುತ್ತಿದೆ ಎಂದು ಆಯುಕ್ತ ಶಶಿಕುಮಾರ್ ಹೇಳಿದರು.

ಈ ಕೃತ್ಯದ ವಿಡಿಯೋ ತಮ್ಮ ಬಳಿ ಇದೆ ಎಂದು ಬಾಲಕರು ಬಾಲಕಿಗೆ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ಥ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಗಳ ಮೊಬೈಲ್‍ಗಳನ್ನು ಸಹ ವಶಪಡಿಸಿಕೊಳ್ಳಲಾಗುವುದು ಮತ್ತು ಅಗತ್ಯ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದರು.

ಅದೇ ರೀತಿ ಅಶೋಕ್‍ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತರಿಂದ ಓರ್ವ ಅಪ್ರಾಪ್ತೆ ಮೇಲೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆದಿದೆ. ಜೊತೆಗೆ ಆಕೆಯ ತಂದೆ ಮೇಲೂ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎಂದು ಶಶಿಕುಮಾರ್ ಮಾಹಿತಿ ನೀಡಿದರು.

ಮೊದಲನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು, ಎರಡನೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ನದಿ ತೀರದಲ್ಲಿ ಸ್ವಚ್ಛತೆ ಕಾಪಾಡಿ

ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಸನಿಹದಲ್ಲಿ ಹರಿಯುವ ಕಪಿಲಾ ನದಿ ತೀರದಲ್ಲಿ ಪುಣ್ಯ ಸ್ನಾನ ಮಾಡುವವರು ಬಟ್ಟೆಗಳನ್ನು ಅಲ್ಲಿಯೇ ಬಿಟ್ಟು ಹೋಗುವುದರಿಂದ…

49 seconds ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಹಾರದಲ್ಲಿ ನಿತೀಶ್ ಕುಮಾರ್ ಆಡಳಿತಕ್ಕೆ ಎಳ್ಳುನೀರು

ಬಿಹಾರ ವಿಧಾನಸಭೆಗೆ ಚುನಾವಣೆ ನಡೆದು ಮೂರೂವರೆ ತಿಂಗಳಾಗುವಷ್ಟರಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಗೆ ಏಕಿಷ್ಟು ಆತುರ? ಏನು ಕಾರಣ ಎನ್ನುವುದಕ್ಕೆಲ್ಲ ಉತ್ತರ…

3 hours ago

ಕೊಡಗಿನಲ್ಲಿ ಜೀತ ಪದ್ಧತಿ ಇನ್ನೂ ಜೀವಂತ

ಕೃಷ್ಣ ಸಿದ್ದಾಪುರ ತೋಟದ ಮಾಲೀಕನ ದೌರ್ಜನ್ಯಕ್ಕೆ ತುತ್ತಾದ ೮ ಕುಟುಂಬಗಳ ೨೬ ಮಂದಿ ರಕ್ಷಣೆ; ಸಾಬೀತಾಗದ ಆರೋಪ  ಸಿದ್ದಾಪುರ: ವ್ಯವಸ್ಥೆಯಲ್ಲಿ ಶತಮಾನಗಳಿಂದ…

3 hours ago

ಹನೂರು: ಗ್ರಾಮದೇವತೆ ಬೆಟ್ಟಳ್ಳಿ ಮಾರಮ್ಮ ಜಾತ್ರೆಗೆ ಸಿದ್ಧತೆ

ಮಹಾದೇಶ್‌ ಎಂ ಗೌಡ  ಮಾ.೯ರಿಂದ ೫ ದಿನಗಳ ಕಾಲ ನಡೆಯಲಿರುವ ಹಬ್ಬ; ಸಾವಿರಾರು ಜನರು ಸೇರುವ ನಿರೀಕ್ಷೆ ಹನೂರು: ಪಟ್ಟಣದ…

3 hours ago

ಮಹಿಳಾ ದಿನದಂದು ಮಹಾರಾಣಿ ವಾಣಿವಿಲಾಸ ಸ್ಮರಣೆ

ಸಿರಿ ಮೈಸೂರು ಮೈಸೂರಿನ ನ್ಯಾಯಾಲಯದ ಮುಂಭಾಗದಿಂದ ಮಾಧವ ರಾವ್ ವೃತ್ತದವರೆಗೂ (ಅಗ್ರಹಾರ ವೃತ್ತ) ಇರುವ ರಸ್ತೆಯನ್ನು ವಾಣಿವಿಲಾಸ ರಸ್ತೆ ಎಂದು…

3 hours ago

ಊರ ಕಾಯುವ ಹೆಣ್ಣು ದೇವಿಯರು ನಮ್ಮನ್ನು ಪೊರೆಯುವ ಸ್ತ್ರೀ ಚೈತನ್ಯದ ಕಥೆ ಹೇಳುವರು

ರಾಧಾ ಆದಿಕಾಲದಿಂದ ಮಾನವರನ್ನು ಮೂಕವಿಸ್ಮಿತನನ್ನಾಗಿ ಮಾಡುತ್ತಾ ಬಂದ ವಿಚಿತ್ರಮಯ ಜಗತ್ ಸೃಷ್ಟಿ ಅವರ ಪಾಲಿಗೆ ಬಿಡಿಸಲಾರದ ಒಗಟು. ಆದಿಮಾನವರಿಗಂತೂ, ಭೂಮ್ಯಾಕಾಶಗಳಲ್ಲಿ…

3 hours ago