ಬೆಳಗಾವಿ: ರಾಜ್ಯದ ಗೃಹಲಕ್ಷ್ಮೀಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ನ್ಯೂಸ್ ನೀಡಿದ್ದು, ಮಾರ್ಚ್.31ರ ನಂತರ ಎರಡು ತಿಂಗಳ ಹಣ ಒಟ್ಟಿಗೆ ಜಮೆಯಾಗಲಿದೆ ಎಂದು ಹೇಳಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಗೃಹಲಕ್ಷ್ಮೀಯರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ನಮ್ಮ ಸರ್ಕಾರ ನಿಮಗೆ ಅನ್ಯಾಯ ಮಾಡುವುದಿಲ್ಲ. ಗೃಹಲಕ್ಷ್ಮೀ ಹಣ ಬಂದೇ ಬರುತ್ತದೆ. ಎರಡು ತಿಂಗಳ ಹಣ ಮಾರ್ಚ್.31ರ ಬಳಿಕ ಒಟ್ಟಿಗೆ ಜಮೆಯಾಗಲಿದೆ ಎಂದರು.
ಇನ್ನು ಅಂಗನವಾಡಿ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಗೆ ಮಾಡಲಾಗಿದೆ. ಈ ಬಜೆಟ್ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು ಒಂದು ಸಾವಿರ, ಸಹಾಯಕಿಯರ ಗೌರವಧನವನ್ನು 750 ರೂ ಹೆಚ್ಚಿಸಿದ್ದೇವೆ. ಅದನ್ನು ಈಗ ಜಾರಿಗೆ ತರುತ್ತೇವೆ ಎಂದು ಹೇಳಿದರು.
ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…