ಚಿಕ್ಕಮಗಳೂರು: ಒಂದೇ ವಾರದಲ್ಲಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇಬ್ಬರಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದ್ದು, ಜನರು ತೀವ್ರ ಆತಂಕ್ಕೀಡಾಗಿದ್ದಾರೆ.
ನವೆಂಬರ್-ಡಿಸೆಂಬರ್ ತಿಂಗಳಿನಲ್ಲಿ ಮೊಟ್ಟೆ ಇಡುವ ಉಣ್ಣೆ ಜನವರಿ ವೇಳೆಗೆ ಮರಿಯಾಗಿ ಹರಡುತ್ತವೆ. ಅವು ಬೇಸಿಗೆ ತಿಂಗಳಾದ ಮಾರ್ಚ್, ಏಪ್ರಿಲ್, ಮೇ ತಿಂಗಳಿನಲ್ಲಿ ಮತ್ತಷ್ಟು ವ್ಯಾಪಕವಾಗಿ ಹರಡಲಿದೆ.
ಆದರೆ ಮಳೆಗಾಲದಲ್ಲಿ ಈ ಉಣ್ಣೆ ಇರುವುದಿಲ್ಲ. 2024ರಲ್ಲಿ ವ್ಯಾಪಕ ಮಳೆ ಸುರಿದಿದ್ದರೂ ಸಹ, ಈ ವರ್ಷದ ಆರಂಭದಲ್ಲಿ ಒಂದೇ ವಾರದಲ್ಲಿ ಇಬ್ಬರಿಗೆ ಕೆಎಫ್ಡಿ ಪತ್ತೆಯಾಗಿದೆ. ಇದರಿಂದ ಕಾಡಂಚಿನ ಕುಗ್ರಾಮಗಳಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ ಮೇಲ್ಪಾಲ್ನಲ್ಲಿ ಓರ್ವ ವ್ಯಕ್ತಿಗೆ ಹಾಗೂ ಚಿಕ್ಕಮಗಳೂರು ತಾಲ್ಲೂಕಿನ ಕಡಬಗೆರೆಯಲ್ಲಿ ಓರ್ವ ಯುವಕನಿಗೆ ಕೆಎಫ್ಡಿ ಕಾಣಿಸಿಕೊಂಡಿದೆ. ಇಬ್ಬರು ಸೋಂಕಿತರ ಜೀವಕ್ಕೆ ಯಾವುದೇ ತೊಂದರೆಯಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಸೂಚನೆ ನೀಡಿರುವ ಆರೋಗ್ಯ ಇಲಾಖೆಯು, ಇದು ಮಾರಣಾಂತಿಕ ವೈರಸ್ ಅಲ್ಲದಿದ್ದರೂ, ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು. ಇಲ್ಲದಿದ್ದರೆ ತೀವ್ರತರವಾದ ಅನಾರೋಗ್ಯ ಎದುರಿಸುವ ಸಂದರ್ಭ ಬರಬಹುದು. ಅದರಲ್ಲೂ ಪ್ರಮುಖವಾಗಿ ಶುಗರ್, ಬಿಪಿ, ಹೃದಯಸಂಬಂಧಿ ಕಾಯಿಲೆಯವರು, ಮದ್ಯ ವ್ಯಸನಿಗಳು ಸೇರಿದಂತೆ ಗಂಭೀರ ಕಾಯಿಲೆ ಇರುವವರು ಎಚ್ಚರದಿಂದ ಇರಬೇಕು ಎಂದು ಸೂಚನೆ ನೀಡಿದೆ.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…