ಚಿಕ್ಕಮಗಳೂರು: ಎನ್.ಆರ್.ಪುರ ತಾಲ್ಲೂಕಿನ ಕಟ್ಟಿನಮನೆ ಗ್ರಾಮದ ಯುವಕನೊಬ್ಬನಿಗೆ ಕೆಎಫ್ಡಿ ಸೋಂಕು ದೃಢವಾಗಿದೆ. ಈ ಮೂಲಕ ಗ್ರಾಮದ ಇಬ್ಬರಲ್ಲಿ ಸೋಂಕು ಪತ್ತೆಯಾದಂತಾಗಿದೆ.
ಗ್ರಾಮದ 30 ವರ್ಷದ ಯುವಕನಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಆತನನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಬ್ಬನಿಗೆ ಬೇರೆ ಅನಾರೋಗ್ಯದ ಕಾರಣ ಮಣಿಪಾಲ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಟ್ಟಿಮನೆ ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರಿಗೆ ಗ್ರಾಮದ ಶುಚಿತ್ವದ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವಂತೆ ಸೂಚನೆ ನೀಡಿದ್ದಾರೆ.
ಇತ್ತೀಚೆಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಬಿಳ್ಕೊಡಿ ಗ್ರಾಮದ 6 ಜನರಿಗೆ ಮಂಗನ ಕಾಯಿಲೆ ಕಾಣಿಸಿಕೊಂಡಿತ್ತು.
ಕೊಡಗು : ಕರುನಾಡಿನ ಕೊಡಗಿನ ಸುಂದರಿ ಸಿನಿ ತಾರೆ ರಶ್ಮಿಕಾ ಮಂದಣ್ಣ ದೇಶ-ವಿದೇಶಗಳಲ್ಲೂ ಖ್ಯಾತಿ ಪಡೆದಿದ್ದಾರೆ. ಹೀಗಾಗಿ ಅವರು ಆಗಾಗ್ಗೆ…
ನಂಜನಗೂಡು : ಅಪ್ರಾಪ್ತೆಯ ಹಿಂದೆ ಬಿದ್ದು ಪ್ರೀತಿಗೆ ಒತ್ತಾಯಿಸಿ ಮದುವೆ ಆಗುವಂತೆ ಪೀಡಿಸಿ ಮಾನಸಿಕ ಕಿರುಕುಳ ನೀಡಿದ ಹಿನ್ನಲೆ ವಿಧ್ಯಾರ್ಥಿನಿ…
ಮೈಸೂರು : ನಾನು ಚಾಮರಾಜ ಕ್ಷೇತ್ರದ ಟಿಕೆಟ್ ಆಕಾಂಕ್ಷಿ. ರಾಷ್ಟ್ರ ಮಟ್ಟಕ್ಕೆ ಹೋಗಲಿಲ್ಲ ಅಂದ್ರೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗಲು ಆಗುತ್ತಾ?…
ಮೈಸೂರು : ರಾಜ್ಯದಲ್ಲಿ ಸರಿಯಾದ ಯೋಜನೆಗಳನ್ನು ಜಾರಿಗೆ ತರುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಗಳು ಹೇಗೆಲ್ಲಾ ಅನುಷ್ಠಾನ…
ಮೈಸೂರು : ರಂಗಾಯಣದ ಮಹತ್ವಾಕಾಂಕ್ಷೆಯ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ವೇದಿಕೆ ಸಜ್ಜಾಗುತ್ತಿದ್ದು, ‘ಬಾಬಾ ಸಾಹೇಬ್-ಸಮತೆಯೆಡೆಗೆ ನಡಿಗೆ’ ಆಶಯದಡಿ ಜ.11 ರಿಂದ…
ಮೈಸೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ನಿನ್ನೆ(ಜ.6) ಇಂಗಿತ ವ್ಯಕ್ತಪಡಿಸಿದ್ದ ಮಾಜಿ ಸಂಸದ ಪ್ರತಾಪ್…