ಬೆಂಗಳೂರು : ೨೦೧೮-೨೩ ರ ಚುನಾವಣೆಯ ಅಫಿಡೆವಿಟ್ ನಲ್ಲಿ ಸಿದ್ದರಾಮಯ್ಯ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಸಿಎಂ ವಿರುದ್ಧ ಎರಡು ಪ್ರತ್ಯೇಕ ದೂರು ಸಲ್ಲಿಕೆ ಮಾಡಲಾಗಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ದೂರು ನೀಡಿದ್ದಾರೆ. ೨೦೧೮ ರ ವಿಧಾನಸಭೆ ಚುನಾವಣೆಯ ವೇಳೆ ಸಿದ್ದರಾಮಯ್ಯ ನೀಡಿದ್ದ ಅಫಿಡೆವಿಟ್ ನಲ್ಲಿ ಪತ್ನಿ ಪಾರ್ವತಿ ಹೆಸರಿನಲ್ಲಿ ೩ ಎಕರೆ ೧೬ ಗುಂಟೆ ಕೃಷಿ ಜಮೀನು ಇದ್ದು, ಇದರ ಮೌಲ್ಯ ೨೫ ಲಕ್ಷ ರೂ ಎಂದು ನಮೂದಿಸಿದ್ದಾರೆ. ಆದರೆ ೨೦೦೫ರಲ್ಲೇ ಈ ಜಮೀನು ಪರಿವರ್ತನೆ ಮಾಡಿಸಿದ್ದ ದಾಖಲೆ ನೀಡಿ ದೂರು ಸಲ್ಲಿಸಿದ್ದಾರೆ. ೨೦೨೩ ರ ವಿಧಾನಸಭೆ ಚುನಾವಣೆಯ ವೇಳೆ ೧೪ ಮುಡಾ ಸೈಟ್ ಗಖ ಮೌಲ್ಯ ಕೇವಲ ೮ ಕೋಟಿ ಎಂದು ಅಫಿಡವಿಟ್ ನಲ್ಲಿ ನಮೂದಿಸಿದ್ದಾರೆ. ಮುಡಾ ೧೪ ಸೈಟ್ ಗಳ ಅಸಲಿ ಮಾರುಕಟ್ಟೆ ಮೌಲ್ಯ ೩೪ ಕೋಟಿ . ಉದ್ದೇಶಪೂರ್ವಕವಾಗಿ ಸಿಎಂ ತಪ್ಪು ಮಾಹಿತಿ ನೀಡಿದ್ದಾರೆಂದು ಮುಖ್ಯ ಚುನಾವಣಾಧಿಕಾರಿಗೆ ಟಿ.ಜೆ ಅಬ್ರಹಾಂ ಎರಡನೇ ದೂರು ಸಲ್ಲಿಸಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…