ಮಂಗಳೂರು: ವಕ್ಫ್ ತಿದ್ದುಪಡಿ ವಿರುದ್ಧ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದು, ವಕ್ಫ್ ತಿದ್ದುಪಡಿ ಕರಡು ಅನ್ನು ಮೇಲ್ನೋಟಕ್ಕೆ ನೋಡುವಾಗ ಅದು ಸಂವಿಧಾನಕ್ಕೆ ವಿರುದ್ಧವಾಗಿರುವಂತೆ ಕಾಣುತ್ತದೆ ಎಂದು ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಇಂದು(ಮಾರ್ಚ್.15) ಈ ಕುರಿತು ಮಾತನಾಡಿದ ಅವರು, ಯಾವುದೇ ತಿದ್ದುಪಡಿಗಳಾಗಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನಕ್ಕೆ ಅನುಗುಣವಾಗಿ ಇದ್ದರೆ ಅದನ್ನು ದೇಶದ ಎಲ್ಲಾ ಜನತೆ ಸಂತೋಷವಾಗಿ ಸ್ವೀಕರಿಸುತ್ತಾರೆ. ಆದರೆ ಈ ತಿದ್ದುಪಡಿ ಸಂವಿಧಾನಕ್ಕೆ ವಿರುದ್ಧವಾಗಿದೆ. ಹೀಗಾಗಿ ಅದನ್ನು ಜನರು ಒಪ್ಪಲು ಸಾಧ್ಯವಾಗುತ್ತಿಲ್ಲ. ಏನೋ ದುರುದ್ದೇಶ ಪೂರ್ವಕವಾಗಿ ರೂಪಿಸಲಾದ ತಿದ್ದುಪಡಿ ಕಾಯ್ದೆ ಆಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಏನೋ ದುರುದ್ದೇಶದಿಂದ ಧ್ವನಿವರ್ಧಕ ಬಂದ್ ಮಾಡಿ ಬಿಂಬಿಸಿದ್ದು, ತಿಂಗಳುಗಟ್ಟಲೇ ನಾಟಕ ಮಾಡಿದ್ದರು. ಅಲ್ಲದೇ ಜನರಲ್ಲಿ ಗೊಂದಲ ಮೂಡಿಸಿದ್ದರು. ಆದರೆ ಇದೀಗ ಅಧಿಕಾರಿಗಳು ಬಂದು ಆ ವಿಚಾರದ ಯಕ್ಷಗಾನವನ್ನು ನಿಲ್ಲಿಸುತ್ತಿದ್ದಾರೆ. ಅದನ್ನು ಯಾಕೆ ನಿಲ್ಲಿಸುತ್ತಿದ್ದಾರೆಂದರೆ ವಕ್ಫ್ ವಿಚಾರದಲ್ಲಿ ಇವರು ಮಾಡಿದ ಕಾನೂನಿನ ಬದಲಾವಣೆಯಿಂದಲೇ ನಿಲ್ಲಿಸುತ್ತಿದ್ದಾರೆ. ಯಾರೇ ಆಗಲಿ ಕಾನೂನನ್ನು ದುರುದ್ದೇಶವಾಗಿಟ್ಟುಕೊಂಡು ತಿದ್ದುಪಡಿ ಮಾಡಿದರೆ ಹೀಗೆ ಆಗುವುದು. ಒಬ್ಬೊಬ್ಬ ಅಧಿಕಾರಿ ಬಂದಾಗ ಅವರಿಗೆ ಇಷ್ಟ ಬಂದಂತೆ ಕಾನೂನು ಪಾಲನೆ ಮಾಡುತ್ತಾರೆ. ಹಾಗಾಗಿಯೇ ಒಂದು ಸಮಸ್ಯೆಯಿಂದ ಮತ್ತೊಂದು ಸಮಸ್ಯೆಯನ್ನು ಸೃಷ್ಟಿಸಬಾರದು ಎಂದು ತಿಳಿಸಿದರು.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…