ರೋಮ್/ಬೆಂಗಳೂರು: ಯಾವುದೇ ಧರ್ಮ, ಸಮಾಜವು ಕೀಳರಿಮೆ ಹಾಗೂ ಪ್ರತ್ಯೇಕತೆಯನ್ನು ಅನುಭವಿಸುವ ವಾತಾವರಣವಿರಬಾರದು. ಧಾರ್ಮಿಕ ನಂಬಿಕೆ ದೌರ್ಬಲ್ಯವಲ್ಲ, ಅದು ಭೂಮಿಯ ಮೇಲಿನ ಸೌಹಾರ್ದತೆಯ ಪ್ರಬಲ ಶಕ್ತಿಯಾಗಿದೆ ಎಂದು ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ತಿಳಿಸಿದ್ದಾರೆ.
ರೋಮ್ನ ವ್ಯಾಟಿಕನ್ ನಗರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೊದಲ ಅಂತರರಾಷ್ಟ್ರೀಯ ಸರ್ವಧರ್ಮ ಸಮ್ಮೇಳನದ ಶತಮಾನೋತ್ಸವ ಸ್ಮರಣಾರ್ಥ ಇಂದು(ಡಿ.3) ಆಯೋಜಿಸಿದ್ದ “ಮಾನವೀಯತೆಗಾಗಿ ಧರ್ಮಗಳ ಒಗ್ಗಟ್ಟು” ಎಂಬ ಶೀರ್ಷಿಕೆಯ ಮೂರು ದಿನಗಳ ವಿಶ್ವ ಸರ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾವು ವೈವಿಧ್ಯತೆಗಳನ್ನು ಹೊಂದಿದ್ದರೂ, ಪ್ರತಿಯೊಬ್ಬರೊಳಗಿರುವ ದೈವಿಕ ಚೇತನವು ಒಂದೇ. ಸಮಾಜವನ್ನು ಮುನ್ನಡೆಸುವ ನನ್ನ ಸಹೋದರ ಸಹೋದರಿಯರೇ, ನಾವಿಂದು ದ್ವೇಷವನ್ನು ತಿರಸ್ಕರಿಸುವ ಪ್ರತಿಜ್ಞೆ ಮಾಡೋಣ ಎಂದಿದ್ದಾರೆ.
ನಾನು ಇಲ್ಲಿ ಯಾವುದೇ ಒಂದು ಧರ್ಮದ ಪ್ರತಿನಿಧಿಯಾಗಿ ಬಂದಿಲ್ಲ. ಬದಲಾಗಿ ಮಾನವೀಯತೆಯ ವಿನಮ್ರ ಧ್ವನಿಯಾಗಿ, ಶಾಂತಿ, ಪ್ರೀತಿ ಮತ್ತು ಸೌಹಾರ್ದತೆಯಿಂದ ತುಂಬಿದ ಒಂದು ಸುಂದರ ಪ್ರಪಂಚದ ಕನಸು ಕಾಣುವ ಶತಕೋಟಿ ಜನರ ಸಾಮೂಹಿಕ ಆಶಯ, ಹೋರಾಟ ಮತ್ತು ಆಕಾಂಕ್ಷೆಗಳನ್ನು ಹೊತ್ತುಕೊಂಡು ಅವರೆಲ್ಲರ ಧ್ವನಿಯಾಗಿ ಇಲ್ಲಿ ನಿಮ್ಮೆದುರು ನಿಂತಿದ್ದೇನೆ ಎಂದು ಹೇಳಿದ್ದಾರೆ.
“ಒಂದು ಜಾತಿ, ಒಂದು ಧರ್ಮ ಮತ್ತು ಒಬ್ಬ ದೇವರು”ಎಂಬಂತೆ ಬ್ರಹ್ಮಶ್ರೀ ನಾರಾಯಣ ಗುರುಗಳ
ಬೋಧನೆಯು ಕೇರಳದಲ್ಲಿ ಸಾಮಾಜಿಕ ಸಮಾನತೆ, ಸಾಮರಸ್ಯ ಮತ್ತು ಶಾಂತಿಯುತ ಸಹಬಾಳ್ವೆಯನ್ನು ಪ್ರತಿಪಾದಿಸುವ ಮಹತ್ವದ ಸಾಮಾಜಿಕ ಆಂದೋಲನವನ್ನು ಸೃಷ್ಟಿಸಿತ್ತು. ಜೊತೆಗೆ, ಶ್ರೀ ನಾರಾಯಣ ಗುರುಗಳು ಸಮಾಜದ ಸಬಲೀಕರಣ ಮತ್ತು ಉನ್ನತೀಕರಣದಲ್ಲಿ ಶಿಕ್ಷಣದ ಮಹತ್ವದ ಬಗ್ಗೆ ಜನರಲ್ಲಿ ಗಾಢವಾದ ಅರಿವು ಮೂಡಿಸಿದ್ದಾರೆ ಎಂದು ತಿಳಿಸಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…