ರಾಜ್ಯ

ಧಾರ್ಮಿಕ ನಂಬಿಕೆ ದೌರ್ಬಲ್ಯವಲ್ಲ, ಅದು ಭೂಮಿಯ ಮೇಲಿನ ಸೌಹಾರ್ದತೆಯ ಪ್ರಬಲ ಶಕ್ತಿ: ಯು.ಟಿ.ಖಾದರ್

ರೋಮ್‌/ಬೆಂಗಳೂರು: ಯಾವುದೇ ಧರ್ಮ, ಸಮಾಜವು ಕೀಳರಿಮೆ ಹಾಗೂ ಪ್ರತ್ಯೇಕತೆಯನ್ನು ಅನುಭವಿಸುವ ವಾತಾವರಣವಿರಬಾರದು. ಧಾರ್ಮಿಕ ನಂಬಿಕೆ ದೌರ್ಬಲ್ಯವಲ್ಲ, ಅದು ಭೂಮಿಯ ಮೇಲಿನ ಸೌಹಾರ್ದತೆಯ ಪ್ರಬಲ ಶಕ್ತಿಯಾಗಿದೆ ಎಂದು ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ತಿಳಿಸಿದ್ದಾರೆ.

ರೋಮ್‌ನ ವ್ಯಾಟಿಕನ್‌ ನಗರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೊದಲ ಅಂತರರಾಷ್ಟ್ರೀಯ ಸರ್ವಧರ್ಮ ಸಮ್ಮೇಳನದ ಶತಮಾನೋತ್ಸವ ಸ್ಮರಣಾರ್ಥ ಇಂದು(ಡಿ.3) ಆಯೋಜಿಸಿದ್ದ “ಮಾನವೀಯತೆಗಾಗಿ ಧರ್ಮಗಳ ಒಗ್ಗಟ್ಟು” ಎಂಬ ಶೀರ್ಷಿಕೆಯ ಮೂರು ದಿನಗಳ ವಿಶ್ವ ಸರ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾವು ವೈವಿಧ್ಯತೆಗಳನ್ನು ಹೊಂದಿದ್ದರೂ, ಪ್ರತಿಯೊಬ್ಬರೊಳಗಿರುವ ದೈವಿಕ ಚೇತನವು ಒಂದೇ. ಸಮಾಜವನ್ನು ಮುನ್ನಡೆಸುವ ನನ್ನ ಸಹೋದರ ಸಹೋದರಿಯರೇ, ನಾವಿಂದು ದ್ವೇಷವನ್ನು ತಿರಸ್ಕರಿಸುವ ಪ್ರತಿಜ್ಞೆ ಮಾಡೋಣ ಎಂದಿದ್ದಾರೆ.

ನಾನು ಇಲ್ಲಿ ಯಾವುದೇ ಒಂದು ಧರ್ಮದ ಪ್ರತಿನಿಧಿಯಾಗಿ ಬಂದಿಲ್ಲ‌. ಬದಲಾಗಿ ಮಾನವೀಯತೆಯ ವಿನಮ್ರ ಧ್ವನಿಯಾಗಿ, ಶಾಂತಿ, ಪ್ರೀತಿ ಮತ್ತು ಸೌಹಾರ್ದತೆಯಿಂದ ತುಂಬಿದ ಒಂದು ಸುಂದರ ಪ್ರಪಂಚದ ಕನಸು ಕಾಣುವ ಶತಕೋಟಿ ಜನರ ಸಾಮೂಹಿಕ ಆಶಯ, ಹೋರಾಟ ಮತ್ತು ಆಕಾಂಕ್ಷೆಗಳನ್ನು ಹೊತ್ತುಕೊಂಡು ಅವರೆಲ್ಲರ ಧ್ವನಿಯಾಗಿ ಇಲ್ಲಿ ನಿಮ್ಮೆದುರು ನಿಂತಿದ್ದೇನೆ ಎಂದು ಹೇಳಿದ್ದಾರೆ.

“ಒಂದು ಜಾತಿ, ಒಂದು ಧರ್ಮ ಮತ್ತು ಒಬ್ಬ ದೇವರು”ಎಂಬಂತೆ ಬ್ರಹ್ಮಶ್ರೀ ನಾರಾಯಣ ಗುರುಗಳ
ಬೋಧನೆಯು ಕೇರಳದಲ್ಲಿ ಸಾಮಾಜಿಕ ಸಮಾನತೆ, ಸಾಮರಸ್ಯ ಮತ್ತು ಶಾಂತಿಯುತ ಸಹಬಾಳ್ವೆಯನ್ನು ಪ್ರತಿಪಾದಿಸುವ ಮಹತ್ವದ ಸಾಮಾಜಿಕ ಆಂದೋಲನವನ್ನು ಸೃಷ್ಟಿಸಿತ್ತು. ಜೊತೆಗೆ, ಶ್ರೀ ನಾರಾಯಣ ಗುರುಗಳು ಸಮಾಜದ ಸಬಲೀಕರಣ ಮತ್ತು ಉನ್ನತೀಕರಣದಲ್ಲಿ ಶಿಕ್ಷಣದ ಮಹತ್ವದ ಬಗ್ಗೆ ಜನರಲ್ಲಿ ಗಾಢವಾದ ಅರಿವು ಮೂಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

9 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

9 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

9 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

10 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

10 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

11 hours ago