ರೋಮ್/ಬೆಂಗಳೂರು: ಯಾವುದೇ ಧರ್ಮ, ಸಮಾಜವು ಕೀಳರಿಮೆ ಹಾಗೂ ಪ್ರತ್ಯೇಕತೆಯನ್ನು ಅನುಭವಿಸುವ ವಾತಾವರಣವಿರಬಾರದು. ಧಾರ್ಮಿಕ ನಂಬಿಕೆ ದೌರ್ಬಲ್ಯವಲ್ಲ, ಅದು ಭೂಮಿಯ ಮೇಲಿನ ಸೌಹಾರ್ದತೆಯ ಪ್ರಬಲ ಶಕ್ತಿಯಾಗಿದೆ ಎಂದು ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ತಿಳಿಸಿದ್ದಾರೆ.
ರೋಮ್ನ ವ್ಯಾಟಿಕನ್ ನಗರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೊದಲ ಅಂತರರಾಷ್ಟ್ರೀಯ ಸರ್ವಧರ್ಮ ಸಮ್ಮೇಳನದ ಶತಮಾನೋತ್ಸವ ಸ್ಮರಣಾರ್ಥ ಇಂದು(ಡಿ.3) ಆಯೋಜಿಸಿದ್ದ “ಮಾನವೀಯತೆಗಾಗಿ ಧರ್ಮಗಳ ಒಗ್ಗಟ್ಟು” ಎಂಬ ಶೀರ್ಷಿಕೆಯ ಮೂರು ದಿನಗಳ ವಿಶ್ವ ಸರ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾವು ವೈವಿಧ್ಯತೆಗಳನ್ನು ಹೊಂದಿದ್ದರೂ, ಪ್ರತಿಯೊಬ್ಬರೊಳಗಿರುವ ದೈವಿಕ ಚೇತನವು ಒಂದೇ. ಸಮಾಜವನ್ನು ಮುನ್ನಡೆಸುವ ನನ್ನ ಸಹೋದರ ಸಹೋದರಿಯರೇ, ನಾವಿಂದು ದ್ವೇಷವನ್ನು ತಿರಸ್ಕರಿಸುವ ಪ್ರತಿಜ್ಞೆ ಮಾಡೋಣ ಎಂದಿದ್ದಾರೆ.
ನಾನು ಇಲ್ಲಿ ಯಾವುದೇ ಒಂದು ಧರ್ಮದ ಪ್ರತಿನಿಧಿಯಾಗಿ ಬಂದಿಲ್ಲ. ಬದಲಾಗಿ ಮಾನವೀಯತೆಯ ವಿನಮ್ರ ಧ್ವನಿಯಾಗಿ, ಶಾಂತಿ, ಪ್ರೀತಿ ಮತ್ತು ಸೌಹಾರ್ದತೆಯಿಂದ ತುಂಬಿದ ಒಂದು ಸುಂದರ ಪ್ರಪಂಚದ ಕನಸು ಕಾಣುವ ಶತಕೋಟಿ ಜನರ ಸಾಮೂಹಿಕ ಆಶಯ, ಹೋರಾಟ ಮತ್ತು ಆಕಾಂಕ್ಷೆಗಳನ್ನು ಹೊತ್ತುಕೊಂಡು ಅವರೆಲ್ಲರ ಧ್ವನಿಯಾಗಿ ಇಲ್ಲಿ ನಿಮ್ಮೆದುರು ನಿಂತಿದ್ದೇನೆ ಎಂದು ಹೇಳಿದ್ದಾರೆ.
“ಒಂದು ಜಾತಿ, ಒಂದು ಧರ್ಮ ಮತ್ತು ಒಬ್ಬ ದೇವರು”ಎಂಬಂತೆ ಬ್ರಹ್ಮಶ್ರೀ ನಾರಾಯಣ ಗುರುಗಳ
ಬೋಧನೆಯು ಕೇರಳದಲ್ಲಿ ಸಾಮಾಜಿಕ ಸಮಾನತೆ, ಸಾಮರಸ್ಯ ಮತ್ತು ಶಾಂತಿಯುತ ಸಹಬಾಳ್ವೆಯನ್ನು ಪ್ರತಿಪಾದಿಸುವ ಮಹತ್ವದ ಸಾಮಾಜಿಕ ಆಂದೋಲನವನ್ನು ಸೃಷ್ಟಿಸಿತ್ತು. ಜೊತೆಗೆ, ಶ್ರೀ ನಾರಾಯಣ ಗುರುಗಳು ಸಮಾಜದ ಸಬಲೀಕರಣ ಮತ್ತು ಉನ್ನತೀಕರಣದಲ್ಲಿ ಶಿಕ್ಷಣದ ಮಹತ್ವದ ಬಗ್ಗೆ ಜನರಲ್ಲಿ ಗಾಢವಾದ ಅರಿವು ಮೂಡಿಸಿದ್ದಾರೆ ಎಂದು ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…