ರಾಜ್ಯ

ಧಾರ್ಮಿಕ ನಂಬಿಕೆ ದೌರ್ಬಲ್ಯವಲ್ಲ, ಅದು ಭೂಮಿಯ ಮೇಲಿನ ಸೌಹಾರ್ದತೆಯ ಪ್ರಬಲ ಶಕ್ತಿ: ಯು.ಟಿ.ಖಾದರ್

ರೋಮ್‌/ಬೆಂಗಳೂರು: ಯಾವುದೇ ಧರ್ಮ, ಸಮಾಜವು ಕೀಳರಿಮೆ ಹಾಗೂ ಪ್ರತ್ಯೇಕತೆಯನ್ನು ಅನುಭವಿಸುವ ವಾತಾವರಣವಿರಬಾರದು. ಧಾರ್ಮಿಕ ನಂಬಿಕೆ ದೌರ್ಬಲ್ಯವಲ್ಲ, ಅದು ಭೂಮಿಯ ಮೇಲಿನ ಸೌಹಾರ್ದತೆಯ ಪ್ರಬಲ ಶಕ್ತಿಯಾಗಿದೆ ಎಂದು ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ತಿಳಿಸಿದ್ದಾರೆ.

ರೋಮ್‌ನ ವ್ಯಾಟಿಕನ್‌ ನಗರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೊದಲ ಅಂತರರಾಷ್ಟ್ರೀಯ ಸರ್ವಧರ್ಮ ಸಮ್ಮೇಳನದ ಶತಮಾನೋತ್ಸವ ಸ್ಮರಣಾರ್ಥ ಇಂದು(ಡಿ.3) ಆಯೋಜಿಸಿದ್ದ “ಮಾನವೀಯತೆಗಾಗಿ ಧರ್ಮಗಳ ಒಗ್ಗಟ್ಟು” ಎಂಬ ಶೀರ್ಷಿಕೆಯ ಮೂರು ದಿನಗಳ ವಿಶ್ವ ಸರ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾವು ವೈವಿಧ್ಯತೆಗಳನ್ನು ಹೊಂದಿದ್ದರೂ, ಪ್ರತಿಯೊಬ್ಬರೊಳಗಿರುವ ದೈವಿಕ ಚೇತನವು ಒಂದೇ. ಸಮಾಜವನ್ನು ಮುನ್ನಡೆಸುವ ನನ್ನ ಸಹೋದರ ಸಹೋದರಿಯರೇ, ನಾವಿಂದು ದ್ವೇಷವನ್ನು ತಿರಸ್ಕರಿಸುವ ಪ್ರತಿಜ್ಞೆ ಮಾಡೋಣ ಎಂದಿದ್ದಾರೆ.

ನಾನು ಇಲ್ಲಿ ಯಾವುದೇ ಒಂದು ಧರ್ಮದ ಪ್ರತಿನಿಧಿಯಾಗಿ ಬಂದಿಲ್ಲ‌. ಬದಲಾಗಿ ಮಾನವೀಯತೆಯ ವಿನಮ್ರ ಧ್ವನಿಯಾಗಿ, ಶಾಂತಿ, ಪ್ರೀತಿ ಮತ್ತು ಸೌಹಾರ್ದತೆಯಿಂದ ತುಂಬಿದ ಒಂದು ಸುಂದರ ಪ್ರಪಂಚದ ಕನಸು ಕಾಣುವ ಶತಕೋಟಿ ಜನರ ಸಾಮೂಹಿಕ ಆಶಯ, ಹೋರಾಟ ಮತ್ತು ಆಕಾಂಕ್ಷೆಗಳನ್ನು ಹೊತ್ತುಕೊಂಡು ಅವರೆಲ್ಲರ ಧ್ವನಿಯಾಗಿ ಇಲ್ಲಿ ನಿಮ್ಮೆದುರು ನಿಂತಿದ್ದೇನೆ ಎಂದು ಹೇಳಿದ್ದಾರೆ.

“ಒಂದು ಜಾತಿ, ಒಂದು ಧರ್ಮ ಮತ್ತು ಒಬ್ಬ ದೇವರು”ಎಂಬಂತೆ ಬ್ರಹ್ಮಶ್ರೀ ನಾರಾಯಣ ಗುರುಗಳ
ಬೋಧನೆಯು ಕೇರಳದಲ್ಲಿ ಸಾಮಾಜಿಕ ಸಮಾನತೆ, ಸಾಮರಸ್ಯ ಮತ್ತು ಶಾಂತಿಯುತ ಸಹಬಾಳ್ವೆಯನ್ನು ಪ್ರತಿಪಾದಿಸುವ ಮಹತ್ವದ ಸಾಮಾಜಿಕ ಆಂದೋಲನವನ್ನು ಸೃಷ್ಟಿಸಿತ್ತು. ಜೊತೆಗೆ, ಶ್ರೀ ನಾರಾಯಣ ಗುರುಗಳು ಸಮಾಜದ ಸಬಲೀಕರಣ ಮತ್ತು ಉನ್ನತೀಕರಣದಲ್ಲಿ ಶಿಕ್ಷಣದ ಮಹತ್ವದ ಬಗ್ಗೆ ಜನರಲ್ಲಿ ಗಾಢವಾದ ಅರಿವು ಮೂಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

8 mins ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

13 mins ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

3 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

4 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

4 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

4 hours ago