ರಾಜ್ಯ

ಕರ್ನಾಟಕದ ಪ್ರವಾಸಿ ತಾಣಗಳಲ್ಲಿ ಚಾಲಕ-ಗೈಡ್ ತರಬೇತಿ ಪ್ರಸ್ತಾವ ಮುಂದಿಟ್ಟ ಉಬರ್

ಬೆಂಗಳೂರು : ಕರ್ನಾಟಕದ ಯುವಕರಿಗೆ ಜೀವನೋಪಾಯದ ಅವಕಾಶಗಳನ್ನು ಒದಗಿಸುವ ಗುರಿ ಹೊಂದಿರುವ ಉಬರ್ ಇಂಡಿಯಾ ಈ ಯೋಜ‌ನೆ‌ ಜಾರಿಗೆ‌ ತರಲು ಮುಂದಾಗಿದೆ. ಚಾಲನೆ ತರಬೇತಿ ಜೊತೆಗೆ ಪ್ರಮಾಣೀಕೃತ ಪ್ರವಾಸಿ-ಮಾರ್ಗದರ್ಶಿ ಕೌಶಲ್ಯ ಒದಗಿಸುವ ಯೋಜನೆ ಆರಂಭಿಸಲು ಸಿದ್ಧತೆ ನಡೆಸಿದೆ. ಈ ನಿಟ್ಟಿನಲ್ಲಿ ವಿಕಾಸ ಸೌಧದಲ್ಲಿ ಮಂಗಳವಾರ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಅವರೊಂದಿಗೆ ಉಬರ್‌ನ ಏಷ್ಯಾ ಪೆಸಿಫಿಕ್‌ನ ಸಾರ್ವಜನಿಕ ನೀತಿ ಮುಖ್ಯಸ್ಥ ಮೈಕ್ ಆರ್ಗಿಲ್ ಮಾತುಕತೆ ನಡೆಸಿದರು.

ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಕೌಶಲ್ಯಗಳೊಂದಿಗೆ ಚಾಲಕರನ್ನು ಸಜ್ಜುಗೊಳಿಸುವುದು ವಿಶೇಷವಾಗಿ ತಳ ಸಮುದಾಯದ ಯುವಕರಿಗೆ ಆದಾಯದ ಅವಕಾಶಗಳನ್ನು ಒದಗಿಸುವುದು ಹಾಗೂ ಸಬಲೀಕರಣಕ್ಕೆ ಆದ್ಯತೆ ನೀಡುವ ಯೋಜನೆ ಇದಾಗಿದೆ ಎಂದು ಹೇಳಿದರು. ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆಎಸ್‌ಡಿಸಿ) ಪ್ರಸ್ತುತ ಅಭ್ಯರ್ಥಿಗಳಿಗೆ ಲಘು ಮತ್ತು ಭಾರೀ ವಾಹನ ಚಾಲನೆ ತರಬೇತಿ ನೀಡುತ್ತದೆ. 100 ಕ್ಕೂ ಹೆಚ್ಚು ತರಬೇತಿ ಪಡೆದ ಚಾಲಕರು ಈಗಾಗಲೇ ಭಾರತ ಮತ್ತು ವಿದೇಶಗಳಲ್ಲಿ ಉದ್ಯೋಗವನ್ನು ಪಡೆದುಕೊಂಡಿದ್ದಾರೆ. ಇದರ ಹಿನ್ನೆಲೆಯಲ್ಲಿ ಉಬರ್ ಸಂಸ್ಥೆ ಗಳಿಕೆಯ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಲು “ಚಾಲಕ-ಕಮ್-ಪ್ರವಾಸಿ ಮಾರ್ಗದರ್ಶಿ” ಮಾದರಿಯನ್ನು ಪ್ರಸ್ತಾಪಿಸಿದೆ. “ತಂತ್ರಜ್ಞಾನ ಮತ್ತು ಪ್ರವಾಸೋದ್ಯಮದಾದ್ಯಂತ ಜೀವನೋಪಾಯದ ಅವಕಾಶಗಳನ್ನು ಹೆಚ್ಚಿಸಲು ವಿವಿಧ ಕೌಶಲ್ಯ ಯೋಜನೆಗಳನ್ನು ನಾವು ಚರ್ಚಿಸಿದ್ದೇವೆ, ಕರ್ನಾಟಕದಲ್ಲಿ ಹೇರಳ ಪ್ರವಾಸೋದ್ಯಮ ತಾಣಗಳಿವೆ. ಅಲ್ಲಿ ಉತ್ತಮ ತರಬೇತಿ ಪಡೆದ ಕ್ಯಾಬ್ ಚಾಲಕರು ಇದ್ದರೆ ಪ್ರವಾಸಿ ಮಾರ್ಗದರ್ಶಿಯಾಗಿಯೂ ಕಾರ್ಯನಿರ್ವಹಿಸಬಹುದು” ಎಂದು ಆರ್ಗಿಲ್ ಹೇಳಿದರು.

ಇದನ್ನೂ ಓದಿ:-ಮೈಸೂರು ವಿ.ವಿ | ವಿದ್ಯಾರ್ಥಿ ಸಂಘದ ಚುನಾವಣೆ : ಕೃಷ್ಣಮೂರ್ತಿ ಗಣಿಗನೂರಿಗೆ ಜಯ

ನಂತರ ಸಚಿವ ಡಾ. ಪಾಟೀಲ್ ಮಾತನಾಡಿ, ಚಾಲಕ ತರಬೇತಿಯಲ್ಲಿ ವಿಶೇಷ ಕೌಶಲ್ಯಗಳನ್ನು ಸಂಯೋಜಿಸುವುದು ಪ್ರಯೋಜನಕಾರಿ. ಇದೊಂದು ಉತ್ತಮ ಯೋಜನೆ ಎಂದು ಸ್ವಾಗತಿಸಿದರು ಮತ್ತು ಮಂಡಳಿಯ ಮುಂದಿನ ಸಭೆಯಲ್ಲಿ ಈ ಪ್ರಸ್ತಾವನೆಯನ್ನು ಮಂಡಿಸಲಾಗುವುದು ಎಂದು ಭರವಸೆ ನೀಡಿದರು. ಹೈವಿಷನ್ ಇಂಡಿಯಾ, ಸುಧಾರಿತ ತಾಂತ್ರಿಕ ತರಬೇತಿಗಾಗಿ ಜಿಟಿಟಿಸಿ ಜೊತೆ ಒಪ್ಪಂದ ಮತ್ತೊಂದು ಸಭೆಯಲ್ಲಿ, ಐಫೋನ್ ತಯಾರಕ ಫಾಕ್ಸ್‌ಕಾನ್‌ಗೆ ಕ್ಯಾಮೆರಾ ಪರಿಕರಗಳನ್ನು ಒದಗಿಸುವ ಕೊರಿಯನ್ ಸಂಸ್ಥೆಯಾದ ಹೈವಿಷನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಸಚಿವ ಡಾ. ಪಾಟೀಲ್ ಸಮ್ಮುಖದಲ್ಲಿ ಜಿಟಿಟಿಸಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿತು. ತಾಂತ್ರಿಕ ತರಬೇತಿ, ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಯಾಂತ್ರೀಕೃತತೆ, ನಿಖರ ಯಂತ್ರೋಪಕರಣ ಮತ್ತು ಸಲಕರಣೆಗಳ ಜೋಡಣೆಯಂತಹ ಕ್ಷೇತ್ರಗಳಲ್ಲಿ ಸೌಲಭ್ಯಗಳ ಹಂಚಿಕೆಯಲ್ಲಿ ಸಹಕಾರಕ್ಕಾಗಿ ಈ ಒಪ್ಪಂದವು ಅವಕಾಶವನ್ನು ಒದಗಿಸುತ್ತದೆ.

ಒಪ್ಪಂದಕ್ಕೆ ಹೈವಿಷನ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಲೀ ಯುನ್ಹೋ ಮತ್ತು ಜಿಟಿಟಿಸಿಯ ವ್ಯವಸ್ಥಾಪಕ ನಿರ್ದೇಶಕ ಸಿದ್ದಲಿಂಗಪ್ಪ ಪೂಜಾರಿ ಸಹಿ ಹಾಕಿದರು. ಎರಡೂ ಸಂಸ್ಥೆಗಳು ಅರ್ಹ ಜಿಟಿಟಿಸಿ ಪ್ರಶಿಕ್ಷಣಾರ್ಥಿಗಳಿಗೆ ಕೈಗಾರಿಕಾ ಮಾನ್ಯತೆ, ಇಂಟರ್ನ್‌ಶಿಪ್ ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಲು ಸಮ್ಮತಿಸಿವೆ. ಜೊತೆಗೆ ಶೈಕ್ಷಣಿಕ ಮತ್ತು ಸಂಶೋಧನಾ ಉದ್ದೇಶಗಳಿಗಾಗಿ ಕೈಗಾರಿಕಾ ಸೌಲಭ್ಯಗಳು ಮತ್ತು ಪ್ರಾತ್ಯಕ್ಷಿಕೆ ಸಲಕರಣೆಗಳನ್ನು ಪೂರೈಸಲಿವೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

5 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

7 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

8 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

10 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

22 hours ago