ರಾಜ್ಯ

ಉದಯಗಿರಿ ಠಾಣೆ ಕೃತ್ಯ ; ಪೂರ್ವ ನಿಯೋಜಿತ ಎಂದ ಆರ್.ಅಶೋಕ್‌

ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕೆಲವು ಪುಂಡರು ನಡೆಸಿದ ಕೃತ್ಯವು ಪೂರ್ವ ನಿಯೋಜಿತ ಎಂದು ಗಂಭೀರ ಆರೋಪ ಮಾಡಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಪ್ರಚೋದನಕಾರಿ ಭಾಷಣ ಮಾಡಿದ ಮುಲ್ಲಾನನ್ನು ಏಕೆ ಬಂಧಿಸಿಲ್ಲ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ವಿಧಾನಸೌಧದಲ್ಲಿ ಮಾಜಿ ಸಚಿವ ಅಶ್ವತ್ಥನಾರಾಯಣ ಅವರ ಜೊತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆಸಿರುವ ದುಷ್ಕೃತ್ಯ ಏಕಾಏಕಿ ನಡೆದಿಲ್ಲ. ಇದು ಪೂರ್ವನಿಯೋಜಿತ ಕೃತ್ಯ. ಈ ಗಲಭೆಗೆ ಪ್ರಚೋದನಕಾರಿ ಭಾಷಣ ಮಾಡಿದ ಮುಲ್ಲಾನನ್ನು ಬಂಧಿಸದೆ ಇರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ಸಂಶಯ ವ್ಯಕ್ತಪಡಿಸಿದರು.

ಡಿಸಿಎಂ ಡಿ.ಕೆ. ಶಿವಕುಮಾರ್ ಕಲ್ಲು ಹೊಡೆದವರು ಸಣ್ಣ ಮಕ್ಕಳು ಎಂದಿದ್ದಾರೆ. ಅವರೇನು ಬೇಬಿ ಸಿಟ್ಟಿಂಗ್‍ನವರಾ? ಕಾಂಗ್ರೆಸ್ ನವರು ಮುಸ್ಲಿಮರ ಭಿಕ್ಷೆಯಲ್ಲಿದ್ದಾರೆ. ಋಣ ತೀರಿಸಲು ಕಾಂಗ್ರೆಸ್ ನವರು ಹೀಗೆ ಮಾಡಿದ್ದಾರೆ. ಮೈಸೂರಿನಲ್ಲಿ ಭಗವಾನ್ ರಾಮನನ್ನು ಬೈಯುತ್ತಾನೆ. ಅವನಿಗೆ ಭಗವಾನ್ ಅಂತಾ ಹೆಸರು ಯಾರು ಇರಿಸಿದರು ಗೊತ್ತಿಲ್ಲ.ಹಿಂದೂಗಳು ಯಾವತ್ತಾದರೂ ಹೋಗಿ ಪೊಲೀಸ್ ಠಾಣೆ ಸುಟ್ಟಿದ್ದಾರಾ? ಮೈಸೂರು ಘಟನೆಯಲ್ಲಿ ಕೊನೆಗೆ ಪೊಲೀಸರೇ ಸಸ್ಪೆಂಡ್ ಆಗುತ್ತಾರೆ.ರಾಜ್ಯದಲ್ಲಿ ಮುಂದೆ ಏನಾದರೂ ಗಲಾಟೆ ಆದರೆ ಕಾಂಗ್ರೆಸ್‍ನವರೇ ಕಾರಣ ಎಂದರು.

ಆರ್ ಎಸ್ ಎಸ್ ನವರೇ ವೇಷ ಧರಿಸಿ ಬಂದಿದ್ದರು ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಒಂದೇ ದಿನದಲ್ಲಿ ಅಷ್ಟು ಗಡ್ಡ ಬಿಟ್ಟುಕೊಂಡು ಹೇಗೆ ಬರಲು ಸಾಧ್ಯ? ಕಾಂಗ್ರೆಸ್ ನವರು ಏನು ಹುಚ್ಚರಾ? ಸಿಸಿಟಿವಿಯಲ್ಲಿ ಯಾವ ಆರ್ ಎಸ್ ಎಸ್ ನವರು ಬಂದಿದ್ದಾರೆ ಅಂತಾ ಕಾಂಗ್ರೆಸ್ ನವರು ತೋರಿಸಲಿ. ಎಲ್ಲಾ ಕಾಣುತ್ತಿರೋದು ಅದೇ ದಾಡಿಗಳೇ ಎಂದು ಹೇಳಿದರು.

ಆರ್.ಎಸ್ ಎಸ್ ಅವರೇ ಗಲಭೆ ಮಾಡಿದ್ದಾರೆ ಎಂಬ ಆರೋಪಕ್ಕೆ ಉತ್ತರಿಸಿದ ಅವರು, ಅಷ್ಟೊಂದು ಗಡ್ಡ ಎಲ್ಲಿಂದ ಬರುತ್ತದೆ. ಅಷ್ಟೊಂದು ಪೈಜಾಮ ಹಾಕೊಂಡು ಎಲ್ಲಿ ಬರ್ತಾರೆ..? ಟೋಪಿಗಳು ಎಲ್ಲಿ ಸಿಗುತ್ತವೆ. ಅಷ್ಟು ಬೇಗ ಗಡ್ಡ ಬಂದು ಬೀಡುತ್ತಾ..? ಗಡ್ಡಕ್ಕೆ ಶೇವ್ ಮಾಡಿಕೊಂಡು ಅಷ್ಟೊಂದು ಜನ ಬರಲು ಸಾಧ್ಯವಾ? ಸುಮನೆ ಆರೋಪ ಮಾಡುವುದು ಕಾಂಗ್ರೆಸ್ ಕೆಲಸವಾಗಿದೆ ಎಂದು ದೂರಿದರು.

ಮಾಜಿ ಸಚಿವ ಅಶ್ವತ್ಥ ನಾರಾಯಣ ಮಾತನಾಡಿ, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಮುಚ್ಚುವ ಭಾಗ್ಯ ಜಾರಿ ಮಾಡುತ್ತಿದೆ. ಮನೆ ಹಾಳು ಸರ್ಕಾರ.ಮಾರಿ ಕಣ್ಣು ಹೋರಿ ಮೇಲೆ ಅನ್ನುವ ಹಾಗೆ ಸಿದ್ದರಾಮಯ್ಯ ಕಣ್ಣು ವಿಶ್ವವಿದ್ಯಾಲಯಗಳ ಮೇಲೆ ಬಿದ್ದಿದೆ ಎಂದು ಕಿಡಿಕಾರಿದರು.

ಮಂಡ್ಯ ವಿಶ್ವವಿದ್ಯಾಲಯ ಮುಚ್ಚಿ ಜಲಕ್ರೀಡೆ ಮಾಡಲು ಹೊರಟ್ಟಿದ್ದಾರೆ. ಅದಕ್ಕೆ ಒಂದು ಸಾವಿರ ಕೊಡಲು ಸಿದ್ದರಿದ್ದಾರೆ. ರೈತರ ಮಕ್ಕಳು ಓದಲು ಹೋಗುತ್ತಾರೆ. ಮೈಸೂರು, ಬೆಂಗಳೂರು ಕಡೆ ವಿದ್ಯಾರ್ಥಿಗಳು ಹೋಗುತ್ತಿದ್ದರು. ಹೀಗಾಗಿ ಮಂಡ್ಯದಲ್ಲಿ ವಿವಿ ಮಾಡಲಾಗಿತ್ತು. ಇದೀಗ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡಲು ಸರ್ಕಾರ ಹೊರಟಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪರಿಷತ್ ಪ್ರತಿಪಕ್ಷ ನಾಯಕ ಛಲವಾಧಿ ನಾರಾಯಣಸ್ವಾಮಿ ಮಾತನಾಡಿ, ಬಿಜೆಪಿ ಅವಧಿಯಲ್ಲಿ ವಿವಿ ಆಗಿದೆ ಎಂದು ಮುಚ್ಚಲು ಹೊರಟಿದ್ದಾರೆ. ಅಂಬೇಡ್ಕರ್ ಸಂವಿಧಾನ ಪ್ರಕಾರ ಪ್ರತಿಯೊಬ್ಬರಿಗೂ ಶಿಕ್ಷಣ ಮುಖ್ಯ. ಆದರೆ ಯುವಕರ ಶಿಕ್ಷಣದಲ್ಲಿ ವಂಚಿತ ಮಾಡಲು ಹೋಗಿದ್ದಾರೆ. ಸರ್ಕಾರ ಇರೋದು ರಿಯಲ್ ಎಸ್ಟೇಟ್ ಮಾಡಲು. ಇದಕ್ಕೆ ಶಿಕ್ಷಣ,ಆರೋಗ್ಯ ಇದ್ಯಾವುದು ಮುಖ್ಯ ಅಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಡವರಿಗೆ ಜನೌಷಧಿ ತೆರೆಯಲು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಇದನ್ನು ರಾಜ್ಯ ಸರ್ಕಾರ ಮಾಡುತ್ತಿಲ್ಲ. ಅವಶ್ಯಕತೆ ಇರುವ ಕಡೆ ಮತ್ತಷ್ಟು ವಿವಿಗಳನ್ನ ತೆಗೆಯಿ. ಅದನ್ನ ಬಿಟ್ಟು ವಿವಿಗಳನ್ನು ಮುಚ್ಚಲು ಹೋಗಬೇಡಿ. ನಾವು ಕಟ್ಟುವುದು, ಕಾಂಗ್ರೆಸ್ ಡೆಮಾಲಿಸ್ ಮಾಡುವುದು. ಇದೊಂದು ರೀತಿ ಡೆಮಾಲಿಸ್ ಸರ್ಕಾರವಾಗಿದೆ ಎಂದು ಕಿಡಿಕಾರಿದರು.

ವ್ಯಾಪರ ಆಗುತ್ತಿಲ್ಲ, ಆದಾಯ ಬರುತ್ತಿಲ್ಲ ಎಂದು ವಿವಿಗಳನ್ನ ಮುಚ್ಚಲು ಹೋಗಿದ್ದಾರೆ. ಹಾಗಾದರೆ ನಿಮ ಆದ್ಯತೆ ಏನು?. ಇದು ರಿಯಲ್ ಎಸ್ಟೇಟ್ ಸರ್ಕಾರ. ನಾಲ್ಕು ಲಕ್ಷ ಕೋಟಿ ಬಜೆಟ್ ಮಂಡನೆ ಮಾಡೋರಿಗೆ 342 ಕೋಟಿ ಭಾರ ಆಗುತ್ತದೆಯೇ ಎಂದು  ಪ್ರಶ್ನಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಕಚ್ಚಾ ತೈಲದ ಬೆಲೆ ಏರಿಕೆ ಸಾಧ್ಯತೆ

ರಿಯಾದ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು, ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದನಾ ರಾಷ್ಟ್ರವಾದ ಸೌದಿ ಅರೇಬಿಯಾದ ತೈಲ…

15 mins ago

ಇರಾನ್-ಇಸ್ರೇಲ್‌ ಸಂಘರ್ಷ: 9 ವಾಯುಪ್ರದೇಶಗಳಲ್ಲಿ ವಿಮಾನ ಹಾರಾಟ ನಡೆಸದಂತೆ DGCA ಸೂಚನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ನಿರ್ದೇಶನಾಲಯ ಗಲ್ಪ್ ಪ್ರದೇಶದಲ್ಲಿನ 9 ವಾಯು ಪ್ರದೇಶಗಳಲ್ಲಿ ಹಾರಾಟ…

25 mins ago

ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ರ ಪರಿಷ್ಕೃತವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಏ.25…

32 mins ago

ಶಿವಮೊಗ್ಗ| ತಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಸಾವು: ಸಚಿವ ಈಶ್ವರ್‌ ಖಂಡ್ರೆ ಸಂತಾಪ

ಬೆಂಗಳೂರು: ಶಿವಮೊಗ್ಗದ ತಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ ದಾಳಿಯಿಂದ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು…

41 mins ago

ರೀಲ್ಸ್‌ ತಂದ ಆಪತ್ತು: ಅಪಘಾತದಲ್ಲಿ ಬಾಲಕ ಸಾವು

ಹುಬ್ಬಳ್ಳಿ: ಸಾಮಾಜಿಕ ಜಾಲತಾಣಗಳಲ್ಲಿ ‘ರೀಲ್ಸ್’ ಮಾಡಲು ಹೋಗಿ 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ…

58 mins ago

ವಿಶ್ವ ಗುಬ್ಬಚ್ಚಿ ದಿನಾಚರಣೆ: ಮೈಸೂರಿನಲ್ಲಿ ಪಕ್ಷಿ ಸಂಕುಲ ರಕ್ಷಣೆಗೆ ಮುಂದಾದ ಮೈಸೂರಿಗರು

ಮೈಸೂರು: ವಿಶ್ವ ಗುಬ್ಬಚ್ಚಿ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಮೈಸೂರಿಗರು ಪಕ್ಷಿ ಸಂಕುಲ ರಕ್ಷಣೆಗೆ ಮುಂದಾಗಿದ್ದಾರೆ. ಮೈಸೂರಿನ ಮಹಾರಾಜ ಮೈದಾನ ಮುಂಭಾಗದ…

1 hour ago