ಉಡುಪಿ: ಪತ್ನಿ ಜ್ಯೋತಿ ಜೋಶಿ ಜೊತೆ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ವೇಳೆ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮಿಜಿಯನ್ನು ಭೇಟಿ ಮಾಡಿ, ಮಠದಲ್ಲೇ ಅನ್ನಪ್ರಸಾದ ಸ್ವೀಕರಿಸಿದರು. ಪರ್ಯಾಯ ಪುತ್ತಿಗೆ ಮಠದಿಂದ ಪ್ರಹ್ಲಾದ್ ಜೋಶಿಗೆ ಗೌರವ ಸಮರ್ಪಿಸಲಾಯಿತು.
ನಟಿ ರನ್ಯಾ ಗೋಲ್ಡ್ ಸ್ಮಗ್ಲಿಂಗ್ ವಿಚಾರವಾಗಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಆರೋಪಿಗೆ ಪ್ರೋಟೋಕಾಲ್ ವ್ಯವಸ್ಥೆ ಮಾಡಿ ಚೆಕ್ಕಿಂಗ್ ಇಲ್ಲದೇ ಬಿಟ್ಟಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಚಕಾರ ಎತ್ತುತ್ತಿಲ್ಲ. ಇದನ್ನೆಲ್ಲಾ ನೋಡಿದರೆ ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಮಂತ್ರಿಗಳ ಪಾತ್ರ ಇದೆ ಎನ್ನುವ ಅನುಮಾನಗಳು ಮೂಡುತ್ತಿವೆ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಇರಬೇಕು. ಸಂಪೂರ್ಣ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.
ರೂಪಾಯಿ ಚಿಹ್ನೆ ನಿರಾಕರಿಸಿದ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿ, ಇದು ರಾಷ್ಟ್ರೀಯ ಹಿತಾಶಕ್ತಿಯ ವಿಚಾರ. ಈ ರೀತಿ ಮಾಡಿರುವುದು ಸರಿಯಲ್ಲ. ರೂಪಾಯಿ ಸಿಂಬಲ್ ಮೋದಿ ಅಥವಾ ಬಿಜೆಪಿ ಮಾಡಿದ್ದಾ? ಈ ಚಿಹೆಯನ್ನು ಮಾಡಿದ್ದು ಕಾಂಗ್ರೆಸ್ ಸರ್ಕಾರ. ಆದರೂ, ಯಾಕೆ ಈ ತೀರ್ಮಾನ ತೆಗೆದುಕೊಂಡ್ರಿ. ನೀವು ಮಾಡಿದ್ದ ಸಿಂಬಲ್ಗೆ ನಮ್ಮದೇನೂ ಅಭ್ಯಂತರವಿರಲಿಲ್ಲ. ಜೊತೆಗೆ ಈ ಡಿಸೈನ್ ಮಾಡಿದ್ದು ತಮಿಳುನಾಡಿನವನು. ನಿಮ್ಮ ಕ್ಷುಲ್ಲಕ ರಾಜಕಾರಣಕ್ಕೆ ಈ ರೀತಿ ಹೇಳಿಕೆ ನೀಡಬೇಡಿ ಎಂದು ಕಿಡಿಕಾರಿದರು.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…