ರಾಜ್ಯ

ಉಡುಪಿ: ಪತ್ನಿ ಜೊತೆ ಶ್ರೀಕೃಷ್ಣನ ದರ್ಶನ ಪಡೆದ ಕೇಂದ್ರ ಸಚಿವ ಜೋಶಿ

ಉಡುಪಿ: ಪತ್ನಿ ಜ್ಯೋತಿ ಜೋಶಿ ಜೊತೆ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ವೇಳೆ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮಿಜಿಯನ್ನು ಭೇಟಿ ಮಾಡಿ, ಮಠದಲ್ಲೇ ಅನ್ನಪ್ರಸಾದ ಸ್ವೀಕರಿಸಿದರು. ಪರ್ಯಾಯ ಪುತ್ತಿಗೆ ಮಠದಿಂದ ಪ್ರಹ್ಲಾದ್‌ ಜೋಶಿಗೆ ಗೌರವ ಸಮರ್ಪಿಸಲಾಯಿತು.

ನಟಿ ರನ್ಯಾ ಗೋಲ್ಡ್‌ ಸ್ಮಗ್ಲಿಂಗ್‌ ವಿಚಾರವಾಗಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಆರೋಪಿಗೆ ಪ್ರೋಟೋಕಾಲ್‌ ವ್ಯವಸ್ಥೆ ಮಾಡಿ ಚೆಕ್ಕಿಂಗ್‌ ಇಲ್ಲದೇ ಬಿಟ್ಟಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಚಕಾರ ಎತ್ತುತ್ತಿಲ್ಲ. ಇದನ್ನೆಲ್ಲಾ ನೋಡಿದರೆ ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಮಂತ್ರಿಗಳ ಪಾತ್ರ ಇದೆ ಎನ್ನುವ ಅನುಮಾನಗಳು ಮೂಡುತ್ತಿವೆ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಇರಬೇಕು. ಸಂಪೂರ್ಣ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

ರೂಪಾಯಿ ಚಿಹ್ನೆ ನಿರಾಕರಿಸಿದ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್‌ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿ, ಇದು ರಾಷ್ಟ್ರೀಯ ಹಿತಾಶಕ್ತಿಯ ವಿಚಾರ. ಈ ರೀತಿ ಮಾಡಿರುವುದು ಸರಿಯಲ್ಲ. ರೂಪಾಯಿ ಸಿಂಬಲ್‌ ಮೋದಿ ಅಥವಾ ಬಿಜೆಪಿ ಮಾಡಿದ್ದಾ? ಈ ಚಿಹೆಯನ್ನು ಮಾಡಿದ್ದು ಕಾಂಗ್ರೆಸ್‌ ಸರ್ಕಾರ. ಆದರೂ, ಯಾಕೆ ಈ ತೀರ್ಮಾನ ತೆಗೆದುಕೊಂಡ್ರಿ. ನೀವು ಮಾಡಿದ್ದ ಸಿಂಬಲ್‌ಗೆ ನಮ್ಮದೇನೂ ಅಭ್ಯಂತರವಿರಲಿಲ್ಲ. ಜೊತೆಗೆ ಈ ಡಿಸೈನ್‌ ಮಾಡಿದ್ದು ತಮಿಳುನಾಡಿನವನು. ನಿಮ್ಮ ಕ್ಷುಲ್ಲಕ ರಾಜಕಾರಣಕ್ಕೆ ಈ ರೀತಿ ಹೇಳಿಕೆ ನೀಡಬೇಡಿ ಎಂದು ಕಿಡಿಕಾರಿದರು.

 

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ | ವಿಶೇಷಚೇತನರಿಗೆ ವಿತರಣೆಯಾಗದ ಸಾಧನಗಳು

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…

2 hours ago

3 ತಿಂಗಳಿಂದ ಬಾರದ ಮಾಸಾಶನ ; ಬಡಜನರು ಕಂಗಾಲು

ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…

2 hours ago

ಗ್ರಾಪಂನಲ್ಲೇ ವಾಸಸ್ಥಳ ದೃಢೀಕರಣ ಪತ್ರ ; ಇನ್ನು ಹೋಬಳಿ ಕೇಂದ್ರಗಳಿಗೆ ಅಲೆಯುವಂತಿಲ್ಲ: ಸರ್ಕಾರದ ತೀರ್ಮಾನ

ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

5 hours ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

6 hours ago