ರಾಜ್ಯ

ಉಡುಪಿ: ಪತ್ನಿ ಜೊತೆ ಶ್ರೀಕೃಷ್ಣನ ದರ್ಶನ ಪಡೆದ ಕೇಂದ್ರ ಸಚಿವ ಜೋಶಿ

ಉಡುಪಿ: ಪತ್ನಿ ಜ್ಯೋತಿ ಜೋಶಿ ಜೊತೆ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ವೇಳೆ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮಿಜಿಯನ್ನು ಭೇಟಿ ಮಾಡಿ, ಮಠದಲ್ಲೇ ಅನ್ನಪ್ರಸಾದ ಸ್ವೀಕರಿಸಿದರು. ಪರ್ಯಾಯ ಪುತ್ತಿಗೆ ಮಠದಿಂದ ಪ್ರಹ್ಲಾದ್‌ ಜೋಶಿಗೆ ಗೌರವ ಸಮರ್ಪಿಸಲಾಯಿತು.

ನಟಿ ರನ್ಯಾ ಗೋಲ್ಡ್‌ ಸ್ಮಗ್ಲಿಂಗ್‌ ವಿಚಾರವಾಗಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಆರೋಪಿಗೆ ಪ್ರೋಟೋಕಾಲ್‌ ವ್ಯವಸ್ಥೆ ಮಾಡಿ ಚೆಕ್ಕಿಂಗ್‌ ಇಲ್ಲದೇ ಬಿಟ್ಟಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಚಕಾರ ಎತ್ತುತ್ತಿಲ್ಲ. ಇದನ್ನೆಲ್ಲಾ ನೋಡಿದರೆ ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಮಂತ್ರಿಗಳ ಪಾತ್ರ ಇದೆ ಎನ್ನುವ ಅನುಮಾನಗಳು ಮೂಡುತ್ತಿವೆ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಇರಬೇಕು. ಸಂಪೂರ್ಣ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

ರೂಪಾಯಿ ಚಿಹ್ನೆ ನಿರಾಕರಿಸಿದ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್‌ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿ, ಇದು ರಾಷ್ಟ್ರೀಯ ಹಿತಾಶಕ್ತಿಯ ವಿಚಾರ. ಈ ರೀತಿ ಮಾಡಿರುವುದು ಸರಿಯಲ್ಲ. ರೂಪಾಯಿ ಸಿಂಬಲ್‌ ಮೋದಿ ಅಥವಾ ಬಿಜೆಪಿ ಮಾಡಿದ್ದಾ? ಈ ಚಿಹೆಯನ್ನು ಮಾಡಿದ್ದು ಕಾಂಗ್ರೆಸ್‌ ಸರ್ಕಾರ. ಆದರೂ, ಯಾಕೆ ಈ ತೀರ್ಮಾನ ತೆಗೆದುಕೊಂಡ್ರಿ. ನೀವು ಮಾಡಿದ್ದ ಸಿಂಬಲ್‌ಗೆ ನಮ್ಮದೇನೂ ಅಭ್ಯಂತರವಿರಲಿಲ್ಲ. ಜೊತೆಗೆ ಈ ಡಿಸೈನ್‌ ಮಾಡಿದ್ದು ತಮಿಳುನಾಡಿನವನು. ನಿಮ್ಮ ಕ್ಷುಲ್ಲಕ ರಾಜಕಾರಣಕ್ಕೆ ಈ ರೀತಿ ಹೇಳಿಕೆ ನೀಡಬೇಡಿ ಎಂದು ಕಿಡಿಕಾರಿದರು.

 

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

10 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

11 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

11 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

11 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

11 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

12 hours ago