ನವದೆಹಲಿ: ಒಂದೆಡೆ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. ಮತ್ತೊಂದೆಡೆ ಯುಜಿಸಿ ನೆಟ್ ಪರೀಕ್ಷೆಯನ್ನು ಪರೀಕ್ಷೆ ನಡೆದ ಮರುದಿನವೇ ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಇದರ ವಿರುದ್ಧ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಎನ್ಟಿಎ ಸಂಸ್ಥೆಯನ್ನು ರದ್ದುಗೊಳಿಸಬೇಕು ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಈ ನಡುವೆ ಎನ್ಟಿಎ ಸಂಸ್ಥೆಯು ಜಂಟಿ ಸಿಎಸ್ಐಆರ್ ಯುಜಿಸಿ-ನೆಟ್ ಪರೀಕ್ಷೆಯನ್ನು ಮುಂದೂಡಿದೆ.
ಸಿಎಸ್ಐಆರ್ ಯುಜಿಸಿ-ನೆಟ್ ಪರೀಕ್ಷೆಯನ್ನು ಅನಿವಾರ್ಯ ಕಾರಣಗಳು ಹಾಗೂ ಲಾಜಿಸ್ಟಿಕ್ ಸಮಸ್ಯೆಗಳಿಂದ ಮುಂದೂಡಲಾಗಿದೆ ಎಂದು ಎನ್ಟಿಎ(ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ) ಸಂಸ್ಥೆ ಶುಕ್ರವಾರ(ಜೂ.21) ಪ್ರಕಟಿಸಿದೆ.
ಜೂನ್ 25 ರಿಂದ 27 ರ ನಡುವೆ ನಡೆಯಬೇಕಿದ್ದ ಈ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಎನ್ಟಿಎ ಹೇಳಿದೆ.
ವಿಜ್ಞಾನ ಕ್ಷೇತ್ರಗಳಲ್ಲಿ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ಜೂನಿಯರ್ ರಿಸರ್ಚ್ ಫೆಲೋಶಿಪ್, ಉಪನ್ಯಾಸಕ, ರಾಷ್ಟ್ರೀಯ ವಿಜ್ಞಾನ ಪ್ರಯೋಗಾಲಯಗಳಲ್ಲಿ ಅಧ್ಯಯನ ಹಾಗೂ ಕೆಲಸ ಮಾಡಲು ಅರ್ಹತೆ ಪಡೆಯಬೇಕಾದರೆ ಸಿಎಸ್ಐಆರ್ ಯುಜಿಸಿ-ನೆಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೇಕು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…