ನವದೆಹಲಿ: ಒಂದೆಡೆ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. ಮತ್ತೊಂದೆಡೆ ಯುಜಿಸಿ ನೆಟ್ ಪರೀಕ್ಷೆಯನ್ನು ಪರೀಕ್ಷೆ ನಡೆದ ಮರುದಿನವೇ ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಇದರ ವಿರುದ್ಧ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಎನ್ಟಿಎ ಸಂಸ್ಥೆಯನ್ನು ರದ್ದುಗೊಳಿಸಬೇಕು ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಈ ನಡುವೆ ಎನ್ಟಿಎ ಸಂಸ್ಥೆಯು ಜಂಟಿ ಸಿಎಸ್ಐಆರ್ ಯುಜಿಸಿ-ನೆಟ್ ಪರೀಕ್ಷೆಯನ್ನು ಮುಂದೂಡಿದೆ.
ಸಿಎಸ್ಐಆರ್ ಯುಜಿಸಿ-ನೆಟ್ ಪರೀಕ್ಷೆಯನ್ನು ಅನಿವಾರ್ಯ ಕಾರಣಗಳು ಹಾಗೂ ಲಾಜಿಸ್ಟಿಕ್ ಸಮಸ್ಯೆಗಳಿಂದ ಮುಂದೂಡಲಾಗಿದೆ ಎಂದು ಎನ್ಟಿಎ(ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ) ಸಂಸ್ಥೆ ಶುಕ್ರವಾರ(ಜೂ.21) ಪ್ರಕಟಿಸಿದೆ.
ಜೂನ್ 25 ರಿಂದ 27 ರ ನಡುವೆ ನಡೆಯಬೇಕಿದ್ದ ಈ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಎನ್ಟಿಎ ಹೇಳಿದೆ.
ವಿಜ್ಞಾನ ಕ್ಷೇತ್ರಗಳಲ್ಲಿ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ಜೂನಿಯರ್ ರಿಸರ್ಚ್ ಫೆಲೋಶಿಪ್, ಉಪನ್ಯಾಸಕ, ರಾಷ್ಟ್ರೀಯ ವಿಜ್ಞಾನ ಪ್ರಯೋಗಾಲಯಗಳಲ್ಲಿ ಅಧ್ಯಯನ ಹಾಗೂ ಕೆಲಸ ಮಾಡಲು ಅರ್ಹತೆ ಪಡೆಯಬೇಕಾದರೆ ಸಿಎಸ್ಐಆರ್ ಯುಜಿಸಿ-ನೆಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಬೇಕು.
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…