ವಿಧಾನಸಭೆ : ನಗರಾಭಿವೃದ್ಧಿ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಒಳಚರಂಡಿ ಮತ್ತು ಅದಕ್ಕೆ ಸಂಬಂಧಿಸಿದ ಸೇವೆಗಳ ನಿರ್ವಹಣೆ ಅಸಾಧ್ಯ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಸುನೀಲ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಈ ಸ್ಪಷ್ಟನೆ ನೀಡಿದರು.
ಇದನ್ನು ಓದಿ: ಡಿನ್ನರ್ ಮೀಟಿಂಗ್ ಶಕ್ತಿ ಪ್ರದರ್ಶನವಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್
ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು ನಗರಾಭಿವೃದ್ಧಿ ಇಲಾಖೆಯ ಹೊಣೆಗಾರಿಕೆ. ನಂತರದಲ್ಲಿ ಅದರ ನಿರ್ವಹಣೆ ಮಾಡುವುದು ಸ್ಥಳೀಯ ನಗರ ಸಂಸ್ಥೆಯ ಜವಾಬ್ದಾರಿಯಾಗಿರುತ್ತದೆ. ಒಂದು ವೇಳೆ, ಈ ಜವಾಬ್ದಾರಿಯನ್ನು ನಿಭಾಯಿಸಬೇಕಾದರೆ ವಾರ್ಷಿಕ 700 ರಿಂದ 800 ಕೋಟಿ ರೂಪಾಯಿ ಬೇಕಾಗುತ್ತದೆ. ಇದರಿಂದ ಸರ್ಕಾರಕ್ಕೆ ಹೊರೆಯಾಗಲಿದೆ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳೇ ತಮ್ಮ ಸಂಪನ್ಮೂಲವನ್ನು ಕ್ರೋಢೀಕರಿಸಿ ನಿರ್ವಹಣೆ ಮಾಡಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಇದಕ್ಕೂ ಮುನ್ನ ಸದಸ್ಯ ಕಿರಣ್ ಕುಮಾರ್ ಕೊಡ್ಗಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕುಂದಾಪುರ ಪಟ್ಟಣದಲ್ಲಿ ಒಟ್ಟು 4183.32 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗಿದ್ದು, ಶೇ.60 ರಷ್ಟು ಪೂರ್ಣಗೊಂಡಿದೆ ಎಂದು ತಿಳಿಸಿದರು.
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…