Mysore
33
scattered clouds

Social Media

ಮಂಗಳವಾರ, 31 ಮಾರ್ಚ್ 2026
Light
Dark

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್‌: ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ

DCM D.K. Shivakumar says there will be a big revolution in the state by 2028

ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್‌ ತಂದರು. ಹಳ್ಳಿಗಳಲ್ಲೂ ಗ್ಯಾಸ್‌ ಬಂತು. ಈಗ ಸಿಟಿಗಳಲ್ಲಿ ಸೌದೆ ಎಲ್ಲಿಂದ ತರೋದು? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಕೇಂದ್ರ ಸರ್ಕಾರಕ್ಕೆ ಪ್ರಶ್ನೆ ಮಾಡಿದರು.

ಈ ಕುರಿತು ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಲೆ ಏರಿಕೆಯಿಂದ ರೋಡ್‌ ಕೆಲಸ ಸ್ಟಾಪ್‌ ಮಾಡಿಸಿದ್ದೇವೆ. ಕಬ್ಬಿಣ, ಸಿಮೆಂಟ್‌ ಬೆಲೆ ಕೂಡ 5 ರಿಂದ 15% ಹೆಚ್ಚಳ ಆಗಿದೆ. ಜನ ಮತ್ತೆ ಸೌದೆಯಿಂದ ಅಡುಗೆ ಮಾಡುವ ಪರಿಸ್ಥಿತಿ ಬಂದಿದೆ. ಸೌದೆ ಮುಕ್ತ ಭಾರತ ಅಂತಾ ಮಾಡಿದ್ರು. ಎಲ್ಲಾ ಕಡೆ ಗ್ಯಾಸ್‌ ತಂದರು. ಸಿಟಿ ಅಲ್ಲ ಹಳ್ಳಿಗಳಲ್ಲೂ ಗ್ಯಾಸ್‌ ಬಂದಿದೆ ಅಂದರು. ಈಗ ಸಿಟಿಗಳಲ್ಲಿ ಸೌದೆ ಎಲ್ಲಿಂದ ತರೋದು? ಕಮರ್ಷಿಯಲ್‌ ಗ್ಯಾಸ್‌ ಎಲ್ಲಿಂದ ಏರಿಸೋದು? ಎಂದು ಪ್ರಶ್ನೆ ಮೇಲೆ ಪ್ರಶ್ನೆ ಮಾಡಿದರು.

 

Tags:
error: Content is protected !!