ರಾಜ್ಯ

ಪಿಎಸ್‌ಐ ಪರೀಕ್ಷೆ ಅಕ್ರಮ ಆರೋಪಿ ಮನೆಗೆ ಉಮೇಶ್ ಜಾಧವ ಭೇಟಿ: ಸ್ಪಷ್ಟನೆ ಕೋರಿದ ಪ್ರಿಯಾಂಕ್ ಖರ್ಗೆ

ಕಲಬುರಗಿ: ಸಾವಿರಾರು ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡಿದ ಪಿಎಸ್ಐ ಪರೀಕ್ಷೆ ಅಕ್ರಮ ಹಗರಣದ ಆರೋಪಿ ಮನೆಗೆ ಹೋಗಿ ಬೆಂಬಲ ಕೋರಿ ಬಂದಿರುವ ಬಗ್ಗೆ ಸಂಸದ ಉಮೇಶ್ ಜಾಧವ್ ಸ್ಪಷ್ಟನೆ ನೀಡಲಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.

ಕಲಬುರಗಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಸುಮಾರು‌ 58,000 ಅಭ್ಯರ್ಥಿಗಳು ಪಿಎಸ್‌ಐ ಪರೀಕ್ಷೆ ಬರೆದಿದ್ದರು. ಅಕ್ರಮ ಹಗರಣದ‌ ಬಯಲಿಗೆ ಬಂದ ನಂತರ ಒಟ್ಟು 114 ಜನರನ್ನು ಬಂಧಿಸಲಾಗಿದೆ. 54 ಅಭ್ಯರ್ಥಿಗಳು ಅದಾಗಲೇ ಆಯ್ಕೆಯಾಗಿದ್ದರು ಅವರನ್ನು ಖಾಯಂ ಸಸ್ಪೆಂಡ್ ಮಾಡಲಾಗಿದೆ. ಅವರಲ್ಲಿ 24 ಅಭ್ಯರ್ಥಿಗಳು ಕಲಬುರಗಿ ಜಿಲ್ಲೆಯಲ್ಲಿ ಪರೀಕ್ಷೆ ಬರೆದಿದ್ದರು. ಹಗಲು ರಾತ್ರಿ ಕಷ್ಟಪಟ್ಟು ಭವಿಷ್ಯದ ಕನಸು ಕಟ್ಟಿಕೊಂಡು ಪರೀಕ್ಷೆ ಬರೆದ ನೈಜ ಅಭ್ಯರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿದ ಆರೋಪಿ ಆರ್ ಡಿ ಪಾಟೀಲ ಮನೆಗೆ ಹೋಗಿ ಚುನಾವಣೆಯಲ್ಲಿ ಬೆಂಬಲ ಕೋರಿದ್ದರ ಬಗ್ಗೆ ಹಾಗೂ ರಾಮನವಮಿ ಉತ್ಸವದಲ್ಲಿ ಮತ್ತೊಬ್ಬ ಆರೋಪಿಯ ಜೊತೆ ಜಾಧವ ಭಾಗಿಯಾಗಿರುವ ಕುರಿತು ಸ್ಪಷ್ಟನೆ‌ ನೀಡಲಿ. ಅಥವಾ ವಿರೋಧ ಪಕ್ಷದ‌ ನಾಯಕ ಆರ್ ಅಶೋಕ ಈ‌ ಬಗ್ಗೆ ರಾಜ್ಯದ ಜನರಿಗೆ ವಿವರಣೆ ನೀಡಲಿ ಎಂದು ಒತ್ತಾಯಿಸಿದರು.

“ಚಿಂಚೋಳಿ ಸಂಸದರು ಹೇಗಾದರೂ ಮಾಡಿ ಮತ ಪಡೆಯಲೇ ಬೇಕು ಎಂದುಕೊಂಡು ಬೆಂಬಲ ಕೇಳಲು ಹೋಗಿದ್ದರೋ ಅಥವಾ ಮೊದಲಿನಿಂದಲೂ ಅವರೊಂದಿಗೆ ಜುಗಲ್ ಬಂಧಿ ಇತ್ತೋ ಗೊತ್ತಿಲ್ಲ. ಅಕ್ರಮದ ಆರೋಪಿ ಆರ್‌ಡಿ ಪಾಟೀಲ ಈಗ ಜೈಲಿನಲ್ಲಿದ್ದಾನೆ ಇವರು ಅಲ್ಲಿಗೆ ಹೋಗಿರುವುದು ನೋಡಿದರೆ ಬಿಜೆಪಿ ಭ್ರಷ್ಟರೊಂದಿಗೆ ಕೈ ಜೋಡಿಸಿದೆ ಎನ್ನುವ ಅನುಮಾನ ಮೂಡುತ್ತದೆ” ಎಂದು ಆರೋಪಿಸಿದರು.

ಪರೀಕ್ಷೆಗಳಲ್ಲಿ ಅಕ್ರಮವಾದರೆ ಲಕ್ಷಾಂತರ ಜನರಿಗೆ ಪರಿಣಾಮ ಬೀರುತ್ತದೆ. ನೈಜ ಅಭ್ಯರ್ಥಿಗಳಿಗೆ ತುಂಬಾ ತೊಂದರೆಯಾಗುತ್ತದೆ. ಅಕ್ರಮ ಬಯಲಿಗೆ ಬಂದಾಗ ಕಾನೂನು ಪ್ರಕ್ರಿಯೆಗಳು ಮುಗಿಯುವದರೊಳಗೆ ಬಹಳ ಜನ ಅಭ್ಯರ್ಥಿಗಳು ಮುಂದಿನ ಪರೀಕ್ಷೆ ಬರೆಯಲು ಆಸಕ್ತಿ ಕಳೆದುಕೊಂಡಿರುತ್ತಾರೆ. ಅಲ್ಲದೇ, ಕೆಲವರ ವಯಸ್ಸು ಮುಗಿರುತ್ತದೆ. ಆದರೆ, ಇದೆಲ್ಲ ಬಿಜೆಪಿ ನಾಯಕರಿಗೆ ಈ ತರಹದ ಆಲೋಚನೆಗಳು ಬರುವುದಿಲ್ಲ ಎಂದು ಹೇಳಿದರು.

ಬಿಜೆಪಿ ಸರ್ಕಾರ ಅವಧಿಯಲ್ಲಿ ಪರೀಕ್ಷೆಗಳಲ್ಲಿ ಅಕ್ರಮ ಸರ್ವೇ ಸಾಮಾನ್ಯವಾಗಿದ್ದವು. ‌ಎಇ, ಜೆಇ, ಕೆಪಿಟಿಸಿಎಲ್ ಸೇರಿದಂತೆ ಪಿಎಸ್ವೈಗಳ ಪರೀಕ್ಷೆ ಗಳಲ್ಲಿ ಅಕ್ರಮ ನಡೆದಿವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಕ್ರಮ ತಡೆಗೆ ಬಿಲ್ ತಂದಿದ್ದೇವೆ. ಅಂದಿನ ಗೃಹ ಸಚಿವ ಅರಗ ಜ್ಞಾನೇಂದ್ರ ಅತ್ಯಂತ ಅಸಮರ್ಥ ಸಚಿವರಾಗಿದ್ದರು. ಆಗ ಅವರೇ ಆರೋಪಿಯೊಬ್ಬರ ಮನೆಗೆ ಹೋಗಿ ಗೋಡಂಬಿ ದ್ರಾಕ್ಷಿ ತಿಂದು ಬಂದಿದ್ದರು. ಈಗ ಜಾಧವ ಊಟ ಮಾಡಿ ಬಂದಿದ್ದಾರೆ ಅಷ್ಟೇ, ಎಂದು ಟೀಕಿಸಿದರು.

ಪರೀಕ್ಷೆಗಳಲ್ಲಿ ಅಕ್ರಮ ತಡೆಯಲು ಕಾಯಿದೆ ತರುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದೆ. ಮತ್ತೊಂದು ಕಡೆ ಮೋದಿ ಭ್ರಷ್ಟಾಚಾರಿಗಳ ವಿರುದ್ದ ಕಠಿಣ ಕ್ರಮದ ಮಾತುಗಳನ್ನಾಡುತ್ತಿದ್ದಾರೆ. ಇಲ್ಲಿ ನೋಡಿದರೆ ಅಭ್ಯರ್ಥಿ ಭ್ರಷ್ಟಚಾರಿಗಳ ಮನೆಗೆ ಹೋಗಿ ಬರುತ್ತಾರೆ. ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಕಲಬುರಗಿಗೆ ಬರುತ್ತಿದ್ದಾರೆ ಅವರಿಗೆ ಸ್ವಾಗತ ಈ ವಿಷಯದ ಕುರಿತಂತೆ ಜನರಿಗೆ ಉತ್ತರ ನೀಡಲಿ ಎಂದು ಖರ್ಗೆ ಆಗ್ರಹಿಸಿದರು.

ಶಾಸಕ ಅಲ್ಲಮಪ್ರಭು ಪಾಟೀಲ, ಪ್ರವೀಣ ಹರವಾಳ, ಡಾ ಕಿರಣ ದೇಶಮುಖ, ಫಾರೂಖ್ ಸೇಟ್, ಪರಶುರಾಮ ನಾಟೀಕಾರ್ ಇದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago